Webdunia - Bharat's app for daily news and videos

Install App

ಸೈಕಲ್ ಸವಾರನ ಉಳಿಸಲು ಹೋಗಿ 32ಕ್ಕೂ ಹೆಚ್ಚು ಸಾವು

Webdunia
ಮಂಗಳವಾರ, 20 ಸೆಪ್ಟಂಬರ್ 2016 (09:33 IST)
ದಾರಿಗಡ್ಡ ಬಂದ ಸೈಕಲ್ ಸವಾರನನ್ನು ಉಳಿಸಲು ಹೋದ ಪರಿಣಾಮ ಬಸ್ ಕಂದಕಕ್ಕೆ ಉರುಳಿ 32ಕ್ಕೂ ಹೆಚ್ಚು ಜನರು ಮೃತ ಪಟ್ಟ ದಾರುಣ ಘಟನೆ ಬಿಹಾರದಲ್ಲಿ ಸೋಮವಾರ ನಡೆದಿದೆ. 
ಮಧುಬನಿಯಿಂದ ಸಿತಾಮರಿಗೆ ಹೋಗುತ್ತಿದ್ದ ಬಸ್ ಬೆನಿಪಟ್ಟಿ ಬಳಿಯ ಜಾರ್ಜ್‌ನಲ್ಲಿ ಕಂದಕಕ್ಕೆ ಉರುಳಿದೆ. ಇಲ್ಲಿಯವರೆಗೆ 32 ಶವಗಳನ್ನು ಎತ್ತಲಾಗಿದ್ದು ಸಾವಿನ ಸಂಖ್ಯೆ ಹೆಚ್ಚಾಗುವ ಆತಂಕ ಎದುರಾಗಿದೆ. ಬಸ್‌ನಲ್ಲಿ ಒಟ್ಟು 50ರಿಂದ 65 ಜನ ಪ್ರಯಾಣಿಸುತ್ತಿದ್ದರು. 
 
ಘಟನೆ ಬಗ್ಗೆ ತೀವ್ರ ಬೇಸರ ವ್ಯಕ್ತ ಪಡಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದಿದ್ದಾರೆ. ರಕ್ಷಣಾ ಕಾರ್ಯ ಮುಂದುವರೆದಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ತಲಾ ನಾಲ್ಕು ಲಕ್ಷ ಪರಿಹಾರ ಘೋಷಿಸಿದೆ. 
 
ಘಟನೆ ಬಗ್ಗೆ ಪ್ರಧಾನಿ ಮೋದಿ ಕೂಡ ಟ್ವೀಟ್ ಮೂಲಕ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.
 
ರಕ್ಷಣಾ ಕಾರ್ಯಾಚರಣೆ ವಿಳಂಬವಾಗುತ್ತಿದೆ ಎಂದು ಸ್ಥಳೀಯರು ರಸ್ತೆ ತಡೆದು ಧರಣಿ ನಡೆಸಿದರು. ಪೊಲೀಸರ ಮೇಲೆ ಕೂಡ ದಾಳಿ ಮಾಡಿದ ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟರ್ಕಿ ಮೇಲೆ ಒಂದೊಂದೆ ಪ್ರತೀಕಾರ ತೀರಿಸುತ್ತಿರುವ ಭಾರತ: ವಿಮಾನಯಾನ ಸಂಸ್ಥೆಯ ಲೈಸನ್ಸ್‌ ರದ್ದು ಮಾಡಿದ ಭಾರತ

ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ: ಬೆಳಗಾವಿಯಲ್ಲಿ ವಿಜಯ್ ಶಾ ವಿರುದ್ಧ ದೂರು

ಸೇನಾಧಿಕಾರಿ ಖುರೇಷಿ ಅತ್ತೆ ಮಾವನ ಮನೆ ಮೇಲೆ ದಾಳಿ ಪೋಸ್ಟ್‌: ಮೂವರ ವಿರುದ್ಧ ಪ್ರಕರಣ ದಾಖಲು

ಬರ್ತಡೇ ಆಚರಿಸಲ್ಲ ಅಂತಾ ಹೇಳಿ ನೆನಪಿನಲ್ಲಿ ಉಳಿದುಕೊಳ್ಳುವ ಹಾಗೇ ದಿನ ಕಳೆದ ಡಿಸಿಎಂ ಡಿಕೆ ಶಿವಕುಮಾರ್‌: Video

ಪಾಕ್‌ಗೆ ಸಹಾಯ ಮಾಡಿದ ಟರ್ಕಿ: ಟರ್ಕಿ ಆ್ಯಪಲ್ ಬ್ಯಾನ್ ಮಾಡಲು ಭಾರತದಲ್ಲಿ ಹೆಚ್ಚಿದ ಒತ್ತಾಯ

ಮುಂದಿನ ಸುದ್ದಿ
Show comments