ಕರ್ನೂಲ್ ನಲ್ಲಿ ಮಂಡ್ಯ ನಿವಾಸಿಗಳಿರುವ ಬಸ್ ಪಲ್ಟಿ; ಓರ್ವ ಸಾವು, 20ಕ್ಕೂ ಹೆಚ್ಚು ಮಂದಿ ಗಾಯ

Webdunia
ಶನಿವಾರ, 23 ಫೆಬ್ರವರಿ 2019 (12:14 IST)
ಹೈದರಾಬಾದ್ :  ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯಲ್ಲಿ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮೃತಪಟ್ಟು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.


ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಗ್ರಾಮದ ನಿವಾಸಿಗಳು ಖಾಸಗಿ ಬಸ್‍ ನಲ್ಲಿ ಮಂತ್ರಾಲಯಕ್ಕೆ ಪ್ರವಾಸಕ್ಕೆ ತೆರಳಿದ್ದು, ಪ್ರವಾಸ ಮುಗಿಸಿ ವಾಪಸ್ ಬರುವಾಗ ಮಂತ್ರಾಲಯ ಕರ್ನೂಲ್ ಮಾರ್ಗದಲ್ಲಿ ಎದುರುಗಡೆಯಿಂದ ಬಂದ ಕಾರನ್ನು ಅವಾಯ್ಡ್ ಮಾಡಲು ಹೋಗಿ ಬಸ್ ಪಲ್ಟಿಯಾಗಿದೆ.


ಬಸ್‍ ನಲ್ಲಿ 45 ಜನ ಪ್ರಯಾಣಿಕರಿದ್ದು ಒಬ್ಬರು ಮೃತಪಟ್ಟಿದ್ದಾರೆ.  20ಕ್ಕೂ ಅಧಿಕ ಜನರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಕರ್ನೂಲ್ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.


ಅಪಘಾತದ ವಿಷಯ ತಿಳಿದ ಕೂಡಲೇ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಕರ್ನೂಲ್ ಪೊಲೀಸ್ ವರಿಷ್ಠಾಧಿಕಾರಿ ಫಕೀರಪ್ಪ ಕಾಗಿನೆಲೆ ಅವರನ್ನು ಸಂಪರ್ಕಿಸಿ ಪ್ರವಾಸಿಗರನ್ನು ಸುರಕ್ಷಿತವಾಗಿ ವಾಪಸ್ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆರ್‌ಎಸ್‌ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ: ಹಕ್ಕು ಕಸಿಯಲು ಹೊರಟವರಿಗೆ ಚಾಟಿ ಎಂದ ಬಿಜೆಪಿ

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚಲನಕ್ಕೆ ಅನುಮತಿ ವಿಚಾರ: ಹೈಕೋರ್ಟ್ ಮಹತ್ವದ ಸೂಚನೆ

ಕದನ ವಿರಾಮಕ್ಕೆ ಒಪ್ಪಿದ ಪಾಕಿಸ್ತಾನ–ಅಫ್ಗಾನಿಸ್ತಾನ: ಮಧ್ಯಸ್ಥಿಕೆ ವಹಿಸಿದ್ದ ಕತಾರ್ ಹೇಳಿದ್ದೇನು

ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನ ಮಳೆಯ ಅಬ್ಬರ: ಮೀನುಗಾರರಿಗೆ ವಾರ್ನಿಂಗ್‌

ಕೆಲಸ ಹುಡುಕಿ ನಗರಕ್ಕೆ ಬಂದಿದ್ದ ಯುವಕ ಅನುಮಾನಸ್ಪದ ಸಾವು

ಮುಂದಿನ ಸುದ್ದಿ
Show comments