Webdunia - Bharat's app for daily news and videos

Install App

ಸಹೋದರಿಯರ ಮೇಲೆ ರೇಪ್ ಮಾಡುವಂತೆ ಆದೇಶಿಸಿಲ್ಲ: ಉ.ಪ್ರ. ಗ್ರಾಮ ಪಂಚಾಯಿತಿ

Webdunia
ಗುರುವಾರ, 3 ಸೆಪ್ಟಂಬರ್ 2015 (22:01 IST)
ಮೇಲ್ಜಾತಿಯ ಮಹಿಳೆಯರೊಂದಿಗೆ ದಲಿತ ಸಹೋದರರು ಓಡಿಹೋಗಿದ್ದಾರೆ ಎನ್ನುವ ಕಾರಣಕ್ಕೆ ಅವರ ಕುಟುಂಬದ ದಲಿತ ಸಹೋದರಿಯರ ಮೇಲೆ ಅತ್ಯಾಚಾರವೆಸಗುವಂತೆ ಆದೇಶ ನೀಡಲಾಗಿದೆ ಎನ್ನುವ ಆರೋಪಗಳನ್ನು ಗ್ರಾಮ ಪಂಚಾಯಿತಿ ತಳ್ಳಿಹಾಕಿದೆ.  
 
ಭಾಗಪತ್ ಪ್ರಾಂತ್ಯದ ಗ್ರಾಮ ಪಂಚಾಯಿತಿ ಸದಸ್ಯರು ಮಾತನಾಡಿ, ಇಂತಹ ಯಾವುದೇ ಆದೇಶ ಹೊರಡಿಸಿಲ್ಲವೆಂದು ಸ್ಪಷ್ಟಪಡಿಸಿದ್ದಾರೆ. ಇಬ್ಬರು ದಲಿತ ಸಹೋದರಿಯರ ಕುಟುಂಬಗಳು ಕೂಡಾ ಅಂತಹ ಆದೇಶ ಹೊರಡಿಸಿಲ್ಲ ಎಂದು ಹೇಳಿದ್ದಾರೆ. ಸ್ಥಳೀಯ ಪೊಲೀಸರು ಕೂಡಾ ಆರೋಪಗಳನ್ನು ತಳ್ಳಿಹಾಕಿದ್ದಾರೆ.
 
ಮಾಜಿ ಸೈನಿಕ ಮತ್ತು ಸಹೋದರಿಯರ ತಂದೆಯಾದ ಧರಮ್ ಪಾಲ್ ಸಿಂಗ್, ಗ್ರಾಮಸ್ಥರಿಂದ ಗ್ರಾಮ ಪಂಚಾಯಿತಿ ಆದೇಶ ಹೊರಡಿಸಿಲ್ಲ ಎನ್ನುವುದು ಕೇಳಿದ್ದೇವೆ ಎಂದು ಹೇಳಿದ್ದಾರೆ.  
 
ಧರ್ಮಪಾಲ್ ಸಿಂಗ್ ಪುತ್ರ ಮೇಲ್ಜಾತಿಯ ವಿವಾಹಿತ ಮಹಿಳೆಯೊಂದಿಗೆ ಪ್ರೇಮ ಪಾಶದಲ್ಲಿ ಸಿಲುಕಿ ಪರಾರಿಯಾಗಿರುವುದು ಎರಡು ಕುಟುಂಬಗಳ ಕಲಹಕ್ಕೆ ಕಾರಣವಾಗಿದೆ. ಸಿಂಗ್ ಪರವಾಗಿ ವಕೀಲರೊಬ್ಬರು ಸುಪ್ರೀಂಕೋರ್ಟ್‌ನಲ್ಲಿ ದೂರು ದಾಖಲಿಸಿ ಇಬ್ಬರು ಸಹೋದರಿಯರ ರಕ್ಷಣೆಗಾಗಿ ಭದ್ರತೆ ನೀಡುವಂತೆ ಕೋರಿದ್ದಾರೆ.   
 
ಸಹೋದರರು ಮೇಲ್ಜಾತಿ ಮಹಿಳೆಯೊಂದಿಗೆ ಪರಾರಿಯಾಗಿದ್ದಕ್ಕಾಗಿ ದಂಡದ ರೂಪದಲ್ಲಿ ಅವರ ಸಹೋದರಿಯರಾದ ಮೀನಾಕ್ಷಿ ಕುಮಾರಿ ಮತ್ತು ಆಕೆಯ ಕಿರಿಯ ಸಹೋದರಿಯನ್ನು ಬೆತ್ತಲೆಗೊಳಿಸಿ ಗ್ರಾಮದ ತುಂಬಾ ಮೆರವಣಿಗೆ ಮಾಡಿಸಿ, ಮುಖಕ್ಕೆ ಕಪ್ಪು ಮಸಿ ಬಳೆದು ನಂತರ ರೇಪ್ ಮಾಡಲಾಗುವುದು ಎನ್ನುವ ಮಾಹಿತಿ ಗ್ರಾಮಸ್ಥರಿಂದ ತಿಳಿದ ಸಹೋದರಿಯರು ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ