ಗಂಗಾ ಸ್ನಾನ ಮಾಡಿದ್ರೆ ಬಡತನ ನಿವಾರಣೆಯಾಗಲ್ಲ, ಪಾಪ ಕಳೆಯಲ್ಲ ಎಂದ ಮಲ್ಲಿಕಾರ್ಜುನ ಖರ್ಗೆಗೆ ತಿರುಗೇಟು

Krishnaveni K
ಮಂಗಳವಾರ, 28 ಜನವರಿ 2025 (11:14 IST)
ಬೆಂಗಳೂರು: ಗಂಗಾಸ್ನಾನ ಮಾಡಿದ್ರೆ ಪಾಪ ಕಳೆಯಲ್ಲ, ಬಡತನ ನಿವಾರಣೆಯಾಗಲ್ಲ ಎಂದಿದ್ದ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ನಾಯಕರು ಮುಗಿಬಿದ್ದಿದ್ದಾರೆ.

ನಿನ್ನೆ ಗೃಹಸಚಿವ ಅಮಿತ್ ಶಾ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದರು. ಇದರ ಬಗ್ಗೆ ಪ್ರತಿಕ್ರಿಯಿಸಿದ್ದ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮೋದಿ-ಅಮಿತ್ ಶಾ ಗಂಗೆಯಲ್ಲಿ ಎಷ್ಟೇ ಸ್ನಾನ ಮಾಡಿದರೂ ಅವರ ಪಾಪ ಕಳೆಯಲ್ಲ, ದೇಶದ ಬಡತನ ನಿವಾರಣೆಯಾಗಲ್ಲ ಎಂದಿದ್ದರು.

ಇದು ಬಿಜೆಪಿ ನಾಯಕರನ್ನು ಕೆರಳಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪ್ರಧಾನಿ ಮೋದಿಜೀ ಮತ್ತು ಗೃಹಸಚಿವ ಅಮಿತ್ ಶಾಜೀ ಅವರ ಗಂಗಾ ಸ್ನಾನದ ಬಗ್ಗೆ ವ್ಯಂಗ್ಯವಾಡುವ ಮೂಲಕ ನೀವು ಹಿಂದೂ ಧಾರ್ಮಿಕ ಶ್ರದ್ಧೆಯನ್ನು ಅವಮಾನಿಸಿದ್ದೀರಿ.

ಸ್ವಾತಂತ್ರ್ಯಾ ನಂತರದ ದಿನಗಳಿಂದಲೂ ನೆಹರು ಕುಟುಂಬದ ಭಟ್ಟಂಗಿಗಳಾಗಿ ಪ್ರಜಾಪ್ರಭುತ್ವದ ಹಾಗೂ ಸಾಂವಿಧಾನಿಕ ಆಶಯಗಳನ್ನು ಕಸದ ಬುಟ್ಟಿಗೆ ಎಸೆದು, ಬಡವರು, ಶೋಷಿತರು, ರೈತರು, ಕೂಲಿ ಕಾರ್ಮಿಕ ಬದುಕನ್ನು ನರಕಕ್ಕೆ ತಳ್ಳಿದ ಕುಖ್ಯಾತಿ ಕಾಂಗ್ರೆಸ್ಸಿಗರದ್ದು. ನಿಮ್ಮ ಹೈಕಮಾಂಡ್ ಓಲೈಸಲು ಹಿಂದೂ ಧಾರ್ಮಿಕ ನಂಬಿಕೆ, ಆಚಾರ-ವಿಚಾರಗಳನ್ನು ಉಲ್ಲೇಖಿಸಿ ನೀವು ಪ್ರಧಾನಿ ಮೋದಿಜೀ ಮತ್ತು ಅಮಿತ್ ಶಾ ಜೀಯವರನ್ನು ಟೀಕಿಸುತ್ತಿರುವ ಪರಿ ನಿಮ್ಮ ತುಕ್ಕು ಹಿಡಿದ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ವಿಜಯೇಂದ್ರ ಟೀಕಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments