Webdunia - Bharat's app for daily news and videos

Install App

ಉಪಚುನಾವಣೆ: ದಿನಕರನ್‌ಗೆ ಭರ್ಜರಿ ಗೆಲುವು, ಮಕಾಡೆ ಮಲಗಿದ ಎಐಎಡಿಎಂಕೆ, ಡಿಎಂಕೆ

Webdunia
ಭಾನುವಾರ, 24 ಡಿಸೆಂಬರ್ 2017 (17:54 IST)
ತಮಿಳುನಾಡಿನ ಮಾಜಿ ಸಿಎಂ ಜಯಲಲಿತಾ ನಿಧನದಿಂದ ತೆರವಾಗಿದ್ದ ಆರ್‌.ಕೆ.ನಗರ್ ವಿಧಾನಸಭೆ ಉಪಚುನಾವಣೆಯಲ್ಲಿ ಟಿಟಿವಿ ದಿನಕರನ್ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಎಐಎಡಿಎಂಕೆ ಪಕ್ಷದ ಬಂಡಾಯ ಅಭ್ಯರ್ಥಿ ದಿನಕರನ್ ವಿರುದ್ಧ ತೊಡೆತಟ್ಟಿದ್ದ ಎಐಎಡಿಎಂಕೆ, ಡಿಎಂಕೆ, ಮತ್ತು ಬಿಜೆಪಿ ಹೀನಾಯ ಸೋಲನುಭವಿಸಿವೆ. ದಿನಕರನ್‌ ನೀಡಿದ ಏಟಿಗೆ ವಿಪಕ್ಷಗಳು ತತ್ತರಿಸಿವೆ.
 
ಇಂದು ಬೆಳಿಗ್ಗೆ ಮತಏಣಿಕೆ ಆರಂಭವಾಗುತ್ತಿದ್ದಂತೆ ಮುನ್ನಡೆ ಸಾಧಿಸಿದ್ದ ದಿನಕರನ್ ಕೊನೆಯವರೆಗೂ ಅದನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು.ದಿನಕರನ್‌ಗೆ 89 ಸಾವಿರ ಮತಗಳು ಬಂದರೆ, ಎಐಎಡಿಎಂಕೆ ಅಭ್ಯರ್ಥಿ ಮಧುಸೂದನ್ ಅವರಿಗೆ 48000 ಮತಗಳು ಬಂದವು.ಡಿಎಂಕೆ ಪಕ್ಷದ ಅಭ್ಯರ್ಥಿ ಗಣೇಶ್ 24 ಸಾವಿರ ಮತಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಇನ್ನೂ ಬಿಜೆಪಿ ಅಭ್ಯರ್ಥಿಗೆ ಕೇವಲ 1236 ಮತಗಳು ಬಂದವು.
 
ಚುನಾವಣೆ ಫಲಿತಾಂಶದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ದಿನಕರನ್, ಮುಂದಿನ ಮೂರೇ ತಿಂಗಳಲ್ಲಿ ಸಿಎಂ ಪಳನಿಸ್ವಾಮಿ ಸರಕಾರ ಪತನವಾಗಲಿದೆ ಎಂದು ಭವಿಷ್ಯ ನುಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments