Publish Date: Sun, 02 Jul 2023 (09:57 IST)
Updated Date: Sun, 02 Jul 2023 (12:01 IST)
ಶೀಘ್ರದಲ್ಲಿ ಮಹಾರಾಷ್ಟ್ರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಏಕನಾಥ್ ಶಿಂದೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇಂದು ಪಕ್ಷದ ಪ್ರಮುಖ ಶಾಸಕರು ಮತ್ತು ಸಚಿವರ ಸಭೆ ಕರೆದಿದ್ದಾರೆ.
ಮೂಲಗಳ ಪ್ರಕಾರ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಸಭೆ ಕರೆಯಲಾಗಿದೆ. ಇದಕ್ಕೂ ಮುನ್ನ ತಡರಾತ್ರಿಯವರೆಗೂ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಮಹತ್ವದ ಸಭೆ ನಡೆಸಿದ್ದಾರೆ.