Select Your Language

Notifications

webdunia
webdunia
webdunia
webdunia

ತಿಂಗಳಾಂತ್ಯದೊಳಗೆ ಸಚಿವ ಸಂಪುಟ ಪುನಾರಚನೆ

Cabinet reshuffle
ಬೆಂಗಳೂರು , ಸೋಮವಾರ, 9 ಮೇ 2016 (12:30 IST)
ಬಹುನಿರೀಕ್ಷಿತ ಸಚಿವ ಸಂಪುಟ ಪುನಾರಚನೆ ಕುರಿತ ಗೊಂದಲಗಳಿಗೆ ತೆರೆ ಎಳೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ತಿಂಗಳ ಒಳಗೆ ಸಚಿವ ಸಂಪುಟ ಪುನಾರಚನೆಯಾಗಲಿದೆ ಎಂದು ಹೇಳಿದ್ದಾರೆ. 
 
ಮೈಸೂರಿನಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೇ ತಿಂಗಳ ಅಂತ್ಯದೊಳಗೆ ನಾನು ಸಚಿವ ಸಂಪುಟ ಪುನಾರಚನೆ ಮಾಡುತ್ತೇನೆ. ಇದಕ್ಕೆ ಯಾವುದೇ ಮಾನದಂಡಗಳಿಲ್ಲ. ಕೆಲ ಸಚಿವರನ್ನು ಬಿಡುತ್ತೇವೆ. ಮತ್ತೆ ಕೆಲವರನ್ನು ಉಳಿಸಿಕೊಳ್ಳುತ್ತೇವೆ. ಹೊಸಬರಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದ್ದಾರೆ. 
 
ಸಚಿವ ಸಂಪುಟ ಪುನಾರಚನೆ ಸಾಕಷ್ಟು ಗೊಂದಲಗಳಿದ್ದವು. ಬರಗಾಲ ಕೂಡ ಕಾಡುತ್ತಿರುವ ಈ ಸಂದರ್ಭದಲ್ಲಿ ಸಂಪುಟ ಪುನಾರಚನೆ ಕುರಿತು ಸಿಎಂ ಯಾವ ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ ಎಂಬ ಪ್ರಶ್ನೆ ಕಾಡುತ್ತಿತ್ತು. ಈ ಎಲ್ಲ ಗೊಂದಲಗಳಿಗೆ ತೆರೆ ಎಳೆದಿರುವ ಸಿಎಂ ಈ ತಿಂಗಳ ಅಂತ್ಯದೊಳಗೆ ತಾನು ಸಚಿವ ಸಂಪುಟ ಪುನಾರಚನೆ ಮಾಡುತ್ತೇನೆ ಇಂದು ಚುಟುಕಾಗಿ ಸ್ಪಷ್ಟೀಕರಣ ನೀಡಿದ್ದಾರೆ.  

Share this Story:

Follow Webdunia kannada

ಮುಂದಿನ ಸುದ್ದಿ

ಹಾಸನ: ಅತ್ಯಾಚಾರ ಎಸಗಿ ಬೆಂಕಿ ಹಚ್ಚಿ ಯುವತಿ ಕೊಲೆ?