Webdunia - Bharat's app for daily news and videos

Install App

ನನ್ನನ್ನು ಮುಖರ್ಜಿ ಸರ್ ಎಂದು ಕರೆದಲ್ಲಿ ಸಂತಸವಾಗುತ್ತದೆ: ವಿದ್ಯಾರ್ಥಿಗಳಿಗೆ ಪ್ರಣಭ್ ಮುಖರ್ಜಿ

Webdunia
ಶುಕ್ರವಾರ, 4 ಸೆಪ್ಟಂಬರ್ 2015 (17:00 IST)
ಶಿಕ್ಷಕರ ದಿನಾಚರಣೆ ನಿಮಿತ್ಯವಾಗಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ಮಕ್ಕಳೊಂದಿಗೆ ಸಂವಾದ ನಡೆಸಿದ್ದು ಒಂದು ವೇಳೆ ವಿದ್ಯಾರ್ಥಿಗಳು ನನಗೆ ಮುಖರ್ಜಿ ಸರ್ ಎಂದು ಕರೆದಲ್ಲಿ ನನಗೆ ತುಂಬಾ ಇಷ್ಟವಾಗುತ್ತದೆ ಎಂದು ಹೇಳಿದ್ದಾರೆ.
 
ರಾಷ್ಟ್ರಪತಿ ಎಸ್ಟೇಟ್‌ ಬಳಿಯಿರುವ ಶಾಲೆಗೆ ಭೇಟಿ ನೀಡಿದ ಮುಖರ್ಜಿ, ಸುಮಾರು ಅರ್ಧ ಗಂಟೆ ಕಾಲ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ನಂತರ ನನ್ನ ಪಾಠದಿಂದ ನಿಮಗೆ ಬೋರಾಗಿದೆಯೇ ಎಂದು ಮಕ್ಕಳನ್ನು ಪ್ರಶ್ನಿಸಿದರು.
 
ನಾನು ರಾಷ್ಟ್ರಪತಿಯಾಗಿ ನಿಮ್ಮ ಬಳಿ ಬಂದು ಸಂವಾದ ನಡೆಸುತ್ತಿಲ್ಲ. ಬದಲಾಗಿ ಒಬ್ಬ ಶಿಕ್ಷಕನಾಗಿ ಬಂದಿದ್ದೇನೆ. ನೀವು ನನ್ನನ್ನು ಹೇಗೆ ಕರೆಯುತ್ತೀರಿ. ನೀವು ನನಗೆ ಮುಖರ್ಜಿ ಸರ್ ಎಂದು ಕರೆದಲ್ಲಿ ನನಗೆ ತುಂಬಾ ಸಂತಸವಾಗುತ್ತದೆ ಎಂದರು. 
 
ಮುಖರ್ಜಿ ತಮ್ಮ ಬಾಲ್ಯದಲ್ಲಿ ನಡೆದ ಘಟನೆಗಳು ಓದಲು ಪಟ್ಟ ಕಷ್ಟಗಳನ್ನು ಎಳೆ ಎಳೆಯಾಗಿ ಬಿಡಿಸಿ ಮಕ್ಕಳ ಮುಂದಿಟ್ಟರು. ವಿದ್ಯಾರ್ಥಿಗಳು ಏಕಾಗ್ರತೆಯಿಂದ ಮುಖರ್ಜಿಯವರ ಮಾತುಗಳನ್ನು ಆಲಿಸಿದರು ಎಂದು ಮೂಲಗಳು ತಿಳಿಸಿವೆ. 
 
ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಶಿಕ್ಷಕರ ದಿನಾಚರಣೆ ಹಿನ್ನೆಲೆಯಲ್ಲಿ ಶಿಕ್ಷಕರನ್ನು ಅಭಿನಂದಿಸಿದರು. ಸಮಾಜದಿಂದ ಶಿಕ್ಷಕ ವೃತ್ತಿಗೆ ಗೌರವ ಮತ್ತು ಪರಿಗಣನೆ ದೊರೆಯಬೇಕಾಗಿದೆ ಎಂದು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಭಿಪ್ರಾಯಪಟ್ಟರು.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments