Webdunia - Bharat's app for daily news and videos

Install App

ಶರಣಾಗಲು ಸಮಯ ಕೊಡಲಾಗದು: ಶಶಿಕಲಾಗೆ ಸುಪ್ರೀಂ ಕೋರ್ಟ್ ತಾಕೀತು

Webdunia
ಬುಧವಾರ, 15 ಫೆಬ್ರವರಿ 2017 (11:22 IST)
ನವದೆಹಲಿ: ಅನಾರೋಗ್ಯದ ನೆಪವೊಡ್ಡಿ ಶರಣಾಗಲು ಸಮಯಾವಕಾಶ ಕೋರಲು ಬಯಸಿದ್ದ ಶಶಿಕಲಾ ನಟರಾಜನ್ ಗೆ ಸುಪ್ರೀಂ ಕೋರ್ಟ್ ತಕ್ಕ ಉತ್ತರ ನೀಡಿದೆ. ನಿನ್ನೆ ನೀಡಿದ ತೀರ್ಪು ಅಂತಿಮ ಎಂದಿದೆ.

 
ನಿನ್ನೆ ನೀಡಿದ ತೀರ್ಪಿನಲ್ಲಿ ಯಾವುದೇ ಬದಲಾವಣೆ ಮಾಡಲಾಗದು. ಅದುವೇ ಅಂತಿಮ. ತೀರ್ಪಿನಲ್ಲಿ ಹೇಳಿದಂತೆ ಕೂಡಲೇ ನ್ಯಾಯಾಲಯಕ್ಕೆ ಶರಣಾಗಬೇಕು. ನೆಪ ಹೇಳಿಕೊಂಡು ಕೂರಬಾರದು. ಅದಕ್ಕೆ ಅವಕಾಶವಿಲ್ಲ ಎಂದು ಸುಪ್ರೀಂ ಕೋರ್ಟ್ ಖಡಾಖಂಡಿತವಾಗಿ ಹೇಳಿದೆ.

ಇದರಿಂದ ತಮ್ಮ ವಕೀಲರ ಮೂಲಕ ಸಮಯಾವಕಾಶ ಕೋರಲು ಬಯಸಿದ್ದ ಶಶಿಕಲಾಗೆ ಹಿನ್ನಡೆಯಾಗಿದೆ.  ಬಂಧನಕ್ಕೊಳಗಾಗುವ ಮೊದಲೇ ಪಕ್ಷದಲ್ಲಿ ತಮ್ಮ ಸ್ಥಾನವನ್ನು ಮತ್ತಷ್ಟು ಭದ್ರಪಡಿಸಲು ಬೇಕಾದ ಎಲ್ಲಾ ವ್ಯವಸ್ಥೆಯನ್ನು ಶಶಿಕಲಾ ಮಾಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ಜಯಲಲಿತಾ ಹೊರ ಹಾಕಿದ್ದ ತಮ್ಮ ಸಂಬಂಧಿ ಟಿ ಟಿ ದಿನಕರನ್ ಅವರನ್ನು ಶಶಿಕಲಾ ಎಐಎಡಿಎಂಕೆ ಪಕ್ಷದ ಉಪ ಕಾರ್ಯದರ್ಶಿಯಾಗಿ ನೇಮಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments