Webdunia - Bharat's app for daily news and videos

Install App

ಐವರು ಪ್ರಮುಖ ನಾಯಕರ ಟ್ವಿಟರ್ ಖಾತೆ ರದ್ದು!

Webdunia
ಗುರುವಾರ, 12 ಆಗಸ್ಟ್ 2021 (13:32 IST)
ನವದೆಹಲಿ(ಆ.12): ಮೈಕ್ರೋಬ್ಲಾಗಿಂಗ್ ಪ್ಲಾಟ್ಫಾರ್ಮ್ ಟ್ವಿಟರ್ ಈಗ ಕಾಂಗ್ರೆಸ್ ಗುರಿಯಾಗಿದೆ. ಹೌದು ದೆಹಲಿಯಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ಸಂತ್ರಸ್ತೆಯ ಕುಟುಂಬದ ಸದಸ್ಯರ ಫೋಟೋ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಕ್ಕಾಗಿ ರಾಹುಲ್ ಗಾಂಧಿ ಖಾತೆಯನ್ನು ಟ್ವಿಟರ್ ಅಮಾನತುಗೊಳಿಸಿತ್ತು. ಇದರ ಬೆನ್ನಲ್ಲೇ ಈಗ ಇನ್ನೂ ಐವರು ಪ್ರಮುಖ ನಾಯಕರ ಖಾತೆಗಳನ್ನು ಅಮಾನತುಗೊಳಿಸಿದೆ.

ಈ ಬೆಳವಣಿಗೆ ಬೆನ್ನಲ್ಲೇ ಕಾಂಗ್ರೆಸ್ಸಿಗರು ಈ ಬಗ್ಗೆ ತಮ್ಮ ಕೋಪ ಹೊರಹಾಕಲಾರಂಭಿಸಿದ್ದಾರೆ. ಅಲ್ಲದೇ ಟ್ವಿಟರ್ನ್ನು ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ಗೆ ಹೋಲಿಸಿದ್ದಾರೆ.
ಫೇಸ್ಬುಕ್ನಲ್ಲಿ ಬರೆದುಕೊಂಡ INC
'ನಮ್ಮ ನಾಯಕರನ್ನು ಜೈಲಿಗೆ ಹಾಕಿದಾಗ ನಾವು ಭಯಪಡಲಿಲ್ಲ, ಆಗಲೇ ನಾವು ಹೆದರಿಲ್ಲ ಎಂದರೆ ಈಗ ಟ್ವಿಟರ್ ಖಾತೆ ರದ್ದುಗೊಂಡಿರುವುದಕ್ಕೆ ಯಾಕೆ ಹೆದರಬೇಕು? ನಾವು ಕಾಂಗ್ರೆಸ್, ಇದು ಜನರ ಸಂದೇಶ, ನಾವು ಹೋರಾಡುತ್ತೇವೆ, ನಾವು ಹೋರಾಡುತ್ತಲೇ ಇರುತ್ತೇವೆ. ಅತ್ಯಾಚಾರಕ್ಕೊಳಗಾದ ಬಾಲಕಿಗೆ ನ್ಯಾಯ ದೊರಕಿಸಿಕೊಡಲು ಧ್ವನಿ ಎತ್ತುವುದು ಅಪರಾಧವಾಗಿದ್ದರೆ, ನಾವು ಈ ಅಪರಾಧವನ್ನು ನೂರು ಬಾರಿ ಮಾಡುತ್ತೇವೆ. ಜೈ ಹಿಂದ್, ಸತ್ಯಮೇವ ಜಯತೆ ಎಂದು ಬರೆದಿದ್ದಾರೆ.
ಕಾಂಗ್ರೆಸ್ ಪಕ್ಷದ ಖಾತೆಯೂ ಸ್ಥಗಿತಗೊಳಿಸಲಾಗಿದೆ
ಬುಧವಾರ ರಾತ್ರಿ ಸೋಶಿಯಲ್ ಮೀಡಿಯಾ ಮಾರ್ಗಸೂಚಿಗಳ ಉಲ್ಲಂಘನೆ ಆರೋಪದಡಿ ಕಾಂಗ್ರೆಸ್ ಪಕ್ಷದ ಅಧಿಕೃತ ಖಾತೆ (@INCIndia) ಸೇರಿದಂತೆ ಪಕ್ಷದ ಮಾಧ್ಯಮ ಮುಖ್ಯಸ್ಥ ರಣದೀಪ್ ಸುರ್ಜೆವಾಲಾ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಅಜಯ್ ಮಾಕನ್, ಲೋಕಸಭೆಯಲ್ಲಿ ಪಕ್ಷದ ಸಚೇತಕ ಮಾಣಿಕ್ಕಂ ಟಾಗೋರ್, ಅಸ್ಸಾಂ ಉಸ್ತುವಾರಿ ಮತ್ತು ಮಾಜಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹಾಗೂ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸುಶ್ಮಿತಾ ದೇವ್ ಅವರ ಟ್ವಿಟರ್ ಖಾತೆಗಳನ್ನು ನಿರ್ಬಂಧಿಸಲಾಗಿದೆ.
ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾದ ಟ್ವಿಟರ್
ಈ ಬೆಳವಣಿಗೆಯ ನಂತರ, ಟ್ವಿಟರ್, ಕಾಂಗ್ರೆಸ್ ನಾಯಕ ಕೆಂಗಣ್ಣಿಗೆ ಗುರಿಯಾಗಿದೆ. ಈ ಬಗ್ಗೆ ತಮ್ಮ ಖಾತೆಯಿಂದ ಪೋಸ್ಟ್ ಒಣದನ್ನು ಶೇರ್ ಮಾಡಿರುವ ಭಾರತೀಯ ಯುವ ಕಾಂಗ್ರೆಸ್ (NYC) ಅಧ್ಯಕ್ಷ ಶ್ರೀನಿವಾಸ್ ಬಿವಿ ಮೊದಲು ರಾಹುಲ್ ಗಾಂಧಿ ಖಾತೆ, ನಂತರ ಕಾಂಗ್ರೆಸ್ ಕಾರ್ಯಕರ್ತರ ಖಾತೆ, ಬಳಿಕ ಕಾಂಗ್ರೆಸ್ ನಾಯಕರ ಖಾತೆ, ಈಗ @INCIndia ನ ಅಧಿಕೃತ ಖಾತೆ. ಈ ಮೂಲಕ Twitter ಬಹಿರಂಗವಾಗಿ ಬಿಜೆಪಿ ಪರ ಬ್ಯಾಟಿಂಗ್ ಮಾಡುತ್ತಿದೆ. ನಾವು ಇನ್ನೂ ಭಾರತದಲ್ಲಿದ್ದೇವಾ ಅಥವಾ ಉತ್ತರ ಕೊರಿಯಾದಲ್ಲಿ ವಾಸಿಸುತ್ತಿದ್ದೇವೆಯೇ? ಎಂದು ಪ್ರಶ್ನಿಸಿ, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ಟ್ವಿಟರ್ ಮುಖ್ಯಸ್ಥ ಜಾಕ್ ಡಾರ್ಸೆ ಅವರೇ ಕಾರಣ ಎಂದು ಕಾಂಗ್ರೆಸ್ ಆರೋಪಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments