Webdunia - Bharat's app for daily news and videos

Install App

ಪಾಪ ಮಾಡಿದ್ರೆ ಕ್ಯಾನ್ಸರ್ ಬರುತ್ತೆ!

Webdunia
ಗುರುವಾರ, 23 ನವೆಂಬರ್ 2017 (14:26 IST)
ಗುವಾಹಟಿ: 'ಪಾಪ ಮಾಡಿದ್ದರೆ ಕ್ಯಾನ್ಸರ್ ಬರುತ್ತದೆ' ಇದನ್ನು ಯಾರೋ ಜ್ಯೋತಿಷಿ ಹೇಳುತ್ತಿದ್ದಾರೆ ಅಂದುಕೊಳ್ಳಬೇಡಿ. ಹೀಗೆ ಹೇಳಿದ್ದು ಅಸ್ಸಾಂನ ಆರೋಗ್ಯ ಸಚಿವ ಹಿಮಾಂತ ಬಿಸ್ವಾ ಸರ್ಮಾ. ಹೊಸತಾಗಿ ಉದ್ಯೋಗಕ್ಕೆ ಸೇರಿದ ಶಾಲಾಶಿಕ್ಷಕರನ್ನು ಉದ್ದೇಶಿಸಿ ಸಚಿವರು ಮಾತನಾಡಿದ್ದಾರೆ.


ಜವಾಬ್ದಾರಿಯಿಂದ ತಪ್ಪಿಸಿಕೊಳ್ಳುವುದು ಪಾಪ. ದೇವರ ನ್ಯಾಯಾಲಯದಲ್ಲಿ ಎಲ್ಲರಿಗೂ ಶಿಕ್ಷೆಯಾಗುತ್ತದೆ. ಈ ಶಿಕ್ಷೆಯ ಫಲವಾಗಿ ಕೆಲವರಿಗೆ ಕ್ಯಾನ್ಸರ್ ಬರುತ್ತದೆ. ಇನ್ನು ಕೆಲವರು ಆಕ್ಸಿಡೆಂಟ್ ಆಗಿ ಸಾಯುತ್ತಾರೆ ಇದೆಲ್ಲವೂ ಅವರವರು ಮಾಡಿದ ಪಾಪದ ಫಲ ಎನ್ನುತ್ತಾರೆ ಸಚಿವ ಹಿಮಾಂತ ಬಿಸ್ವಾ.


ಬಿಸ್ವಾ ಅವರ ಈ ರೀತಿಯ ಹೇಳಿಕೆಯನ್ನು ಎಐಯುಡಿಎಫ್ ವಕ್ತಾರ ಇಮಿನುಲ್ ಇಸ್ಲಾಂ ಖಂಡಿಸಿದ್ದಾರೆ. ತಂತ್ರಜ್ಞಾನದ ಯುಗ ದಲ್ಲಿ ಬಿಸ್ವಾ ಅವರು ಈ ರೀತಿ ಹೇಳಿಕೆ ನೀಡುವುದು ಹಾಸ್ಯಾಸ್ಪದವಾಗಿದೆ. ಕೆಲವು ವರ್ಷಗಳ ಹಿಂದೆಯೇ ಸಚಿವರು ಕ್ಯಾನ್ಸರ್ ತಡೆಗಟ್ಟಲು ತಂಬಾಕು ನಿಷೇಧ ಕಾನೂ ತಂದಿದ್ದರು. ಈಗ ಬೇರೊಂದು ಹೇಳಿಕೆ ನೀಡುತ್ತಿದ್ದಾರೆ. ಇದರಿಂದ ಕ್ಯಾನ್ಸರ್ ಪೀಡಿತರಿಗೆ ನೋವಾಗುತ್ತದೆ ಎಂದು ಇಮಿನುಲ್ ಇಸ್ಲಾಂ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments