Webdunia - Bharat's app for daily news and videos

Install App

ಕಾವೇರಿ ವಿವಾದ: ಆದೇಶ ಮಾರ್ಪಾಡು ಕೋರಿ ಕರ್ನಾಟಕ ಸಲ್ಲಿಸಿದ್ದ ಅರ್ಜಿ ವಜಾ

Webdunia
ಶುಕ್ರವಾರ, 7 ಏಪ್ರಿಲ್ 2017 (15:09 IST)
ಸುಪ್ರೀಂಕೋರ್ಟ್ ಆದೇಶವನ್ನು ಮಾರ್ಪಾಡುಗೊಳಿಸುವಂತೆ ಕೋರಿ ರಾಜ್ಯ ಸರಕಾರ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗಳಿಸಿದೆ.
 
ಇಂದು ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌ನ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ದ್ವಿಸದಸ್ಯ ಪೀಠ, ಅರ್ಜಿಯನ್ನು ವಜಾಗೊಳಿಸಿದೆ.
 
ಸುಪ್ರೀಂಕೋರ್ಟ್, 2016 ಸೆಪ್ಟೆಂಬರ್ 16 ರಿಂದ ಸೆಪ್ಟೆಂಬರ್ 30 ರವರೆಗೆ 6 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರಕಾರಕ್ಕೆ ಆದೇಶಿಸಿತ್ತು. ಆದರೆ, ಕಾವೇರಿ ಜಲಾನಯನದಲ್ಲಿ ಕುಡಿಯುವ ನೀರಿಗೆ ಕೊರತೆ ಎದುರಾಗಿದ್ದರಿಂದ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎನ್ನುವುದು ರಾಜ್ಯದ ವಾದವಾಗಿತ್ತು. 
 
ರಾಜ್ಯದ ಕಾವೇರಿ ಕಣಿವೆಯಲ್ಲಿ ನೀರಿಲ್ಲದ ಕಾರಣ ಆದೇಶ ಮಾರ್ಪಾಡು ಮಾಡುವಂತೆ ಕರ್ನಾಟಕ ಸರಕಾರ ಅರ್ಜಿ ಸಲ್ಲಿಸಿತ್ತು. ಇದೀಗ ಅರ್ಜಿಯನ್ನು ವಜಾಗೊಳಿಸಿ ಸುಪ್ರೀಂಕೋರ್ಟ್ ಮತ್ತೆ ರಾಜ್ಯಕ್ಕೆ ಬರೆ ನೀಡಿದೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments