Webdunia - Bharat's app for daily news and videos

Install App

ಕಾವೇರಿ ನ್ಯಾಯಾಧಿಕರಣ: ತಮಿಳುನಾಡು ಸರ್ಕಾರಕ್ಕೆ ಹಿನ್ನಡೆ

Webdunia
ಮಂಗಳವಾರ, 15 ಜುಲೈ 2014 (12:31 IST)
ನ್ಯಾ. ಬಿ.ಎಸ್. ಚೌಹಾಣ್ ನೇತೃತ್ವದಲ್ಲಿ  ಕಾವೇರಿ ನ್ಯಾಯಾಧಿಕರಣದ ವಿಚಾರಣೆ ನಡೆಯುತ್ತಿದ್ದು, ತಮಿಳುನಾಡು ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಕರ್ನಾಟಕ ಮತ್ತು ತಮಿಳುನಾಡು ಸಲ್ಲಿಸಿರುವ ಅರ್ಜಿ ಬಾಕಿಯಿರುವುದರಿಂದ ಈ ಹಂತದಲ್ಲಿ  ನ್ಯಾಯಾಧಿಕರಣದ  ವಿಚಾರಣೆಗೆ ಕರ್ನಾಟಕ ಆಕ್ಷೇಪ ಸಲ್ಲಿಸಿತು.

ಕರ್ನಾಟಕದ ವಾದವನ್ನು ಒಪ್ಪಿದ ನ್ಯಾಯಾಧಿಕರಣ, ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವಂತೆ ತಮಿಳುನಾಡಿಗೆ  ಸೂಚನೆ ನೀಡಿದೆ.ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಬಾಕಿವುಳಿದಿರುವುದರಿಂದ ವಿಚಾರಣೆ ನಡೆಸಲು ನ್ಯಾಯಾಧಿಕರಣ ನಿರಾಕರಿಸಿತು. ವಿಚಾರಣೆ ನಡೆಸಬೇಕೋ ಬೇಡವೋ ಎಂದು ಸುಪ್ರೀಂಕೋರ್ಟ್‌ನಿಂದ ಸ್ಪಷ್ಟನೆ ಪಡೆಯಿರಿ ಎಂದು ಅದು ತಮಿಳುನಾಡಿಗೆ ಸೂಚಿಸಿತು.  
 
ಈ ನಡುವೆ ಕಾವೇರಿ ವಿವಾದದ ಕುರಿತು ಸಿಎಂ ಜೊತೆ ಚರ್ಚಿಸಿದ್ದೇನೆ ಎಂದು ನವದೆಹಲಿಯಲ್ಲಿ ಎಚ್.ಡಿ.ದೇವೇಗೌಡ ಅವರು ಹೇಳಿದ್ದಾರೆ. ಸಿಎಂಗೆ ನನ್ನ ಅಭಿಪ್ರಾಯಗಳನ್ನು ತಿಳಿಸಿದ್ದೇನೆ. ಇಂದು ಕಾವೇರಿ ನ್ಯಾಯಾಧಿಕರಣದ ವಿಚಾರಣೆಯಿದೆ. ಏನಾಗುತ್ತದೆಯೋ ಎಂದು ಸಂಜೆಯವರೆಗೆ ಕಾದು ನೋಡೋಣ ಎಂದು ದೇವೇಗೌಡ ಹೇಳಿದರು.  ಸದಾನಂದ ಗೌಡ ದಿಟ್ಟವಾದ ಕ್ರಮ ಕೈಗೊಂಡಿದ್ದಾರೆ ಎಂದು ಅವರು ಹೇಳಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments