Webdunia - Bharat's app for daily news and videos

Install App

ಕಾವೇರಿ ವಿವಾದ: ತಮಿಳುನಾಡಲ್ಲಿ 48 ಗಂಟೆ ರೈಲ್ ರೋಖೋ ಧರಣಿ

Webdunia
ಸೋಮವಾರ, 17 ಅಕ್ಟೋಬರ್ 2016 (15:11 IST)
ತಮಿಳುನಾಡು ಮತ್ತು ಕರ್ನಾಟಕದ ನಡುವೆ ನಡೆಯುತ್ತಿರುವ ನೀರಿನ ವಿವಾದ ಇತ್ಯರ್ಥಗೊಳಿಸಲು ಕಾವೇರಿ ಆಡಳಿತ ಮಂಡಳಿಯನ್ನು ಸ್ಥಾಪಿಸುವಲ್ಲಿ ಕೇಂದ್ರ ಮಧ್ಯಪ್ರವೇಶಿಸಬೇಕೆಂದು ರೈತ ಫೆಡರೇಷನ್ 'ರೈಲ್ ರೋಖೋ' ಚಳುವಳಿಗೆ ಮುಂದಾಗಿದ್ದು, ವಿರೋಧ ಪಕ್ಷ ಡಿಎಂಕೆ ಕೂಡ ಅದಕ್ಕೆ ಸಾಥ್ ನೀಡಿದೆ.
ಪೆರಂಬೂರ್‌ನಲ್ಲಿ ಧರಣಿಯ ನೇತೃತ್ವ ವಹಿಸಿದ್ದ ಡಿಎಂಕೆ ಖಜಾಂಚಿ ಮತ್ತು ವಿರೋಧ ಪಕ್ಷದ ನಾಯಕ ಎಂ.ಕೆ ಸ್ಟಾಲಿನ್ ಅವರನ್ನು ಬಂಧಿಸಿದ ಪೊಲೀಸರು ಬಳಿಕ ಬಿಡುಗಡೆ ಮಾಡಿದರು.  
 
ಡಿಎಂಕೆಯ ಸಾವಿರಾರು ಕಾರ್ಯಕರ್ತರು, ಎಡ ಪಕ್ಷ ಮತ್ತು ಎಂಡಿಎಂಕೆ ಕಾರ್ಯಕರ್ತರು  ತಂಜಾವೂರ್ ಮತ್ತು ಕುಡ್ಡಲೋರ್‌ಗಳಲ್ಲಿ ಧರಣಿ ನಡೆಸಿದ್ದು ಪೊಲೀಸರು ಅವರನ್ನು ಬಂಧಿಸಿದ್ದಾರೆ. 
 
ಚೆನ್ನೈನಲ್ಲಿ ರೈಲು ನಿಲ್ದಾಣಗಳು ಸೇರಿದಂತೆ ಸರ್ಕಾರಿ ಸಂಸ್ಥೆಗಳ ಎದುರು ಧರಣಿಯನ್ನು ನಡೆಸಲಾಯಿತು. 
 
"ಸುಪ್ರೀಂ ಕೋರ್ಟ್ ತಮಿಳುನಾಡಿಗೆ ಬಿಡಲು ಆದೇಶಿಸಿರುವ ನೀರಿನ ಪ್ರಮಾಣ ಅಸಮರ್ಪಕ ಆಗಿದೆ. ಅಲ್ಲದೆ, ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಕಾವೇರಿ ನೀರಿನ ಮೇಲೆ ರಾಜಕೀಯ ಆಟವನ್ನಾಡುತ್ತಿದೆ," ಎಂದು  ಡಿಎಂಕೆ ನಾಯಕ ಕಿಡಿಕಾರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂದೇಶ್‌ಖಾಲಿ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಸಿಬಿಐ: ಟಿಎಂಸಿ ಮುಖಂಡ ಶಹಜಹಾನ್‌ ಶೇಖ್‌ಗೆ ಶಾಕ್‌

ಕೌಟುಂಬಿಕ ಕಲಹದಿಂದ ಬೇಸತ್ತು ಲಾಡ್ಜ್‌ನಲ್ಲೇ ಸಾವಿಗೆ ಶರಣಾದ ದಾವಣಗೆರೆಯ ಸಬ್‌ ಇನ್‌ಸ್ಪೆಕ್ಟರ್‌

ಸಿಎಂ ಬದಲಾವಣೆ ಕೂಗಿನ ಬೆನ್ನಲ್ಲೇ ಸಿದ್ದರಾಮಯ್ಯಗೆ ಎಐಸಿಸಿಯಲ್ಲಿ ಹೊಸ ಜವಾಬ್ದಾರಿ: ಏನಿದು ಲೆಕ್ಕಾಚಾರ

ಅಜ್ಞಾತ ವಾಸದಿಂದ ಹೊರಬಂದ ಇರಾನ್‌ನ ಸರ್ವೋಚ್ಚ ನಾಯಕ: ಜನರತ್ತ ಕೈಬೀಸಿದ ಅಯಾತೊಲ್ಲಾ ಅಲಿ

ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹದಿಂದ 50 ಮಂದಿ ಸಾವು: 850 ಮಂದಿಯ ರಕ್ಷಣೆ, 27 ವಿದ್ಯಾರ್ಥಿನಿಯರು ನಾಪತ್ತೆ

ಮುಂದಿನ ಸುದ್ದಿ
Show comments