Webdunia - Bharat's app for daily news and videos

Install App

ಕಾವೇರಿ'ದ' ಕಲಹ: ನೀರು ಬಿಡದಿದ್ದಕ್ಕೆ 2,480 ಕೋಟಿ ಪರಿಹಾರ ಕೇಳಿದ ತಮಿಳುನಾಡು

Webdunia
ಸೋಮವಾರ, 9 ಜನವರಿ 2017 (12:54 IST)
ಜಯಲಲಿತಾ ಸಾವಿನ ಬಳಿಕವೂ ಕಾವೇರಿಗಾಗಿ ಕಲಹವನ್ನು ಮುಂದುವರೆಸಿರುವ ತಮಿಳುನಾಡು ಸುಪ್ರೀಂ ಕೋರ್ಟ್ ಆದೇಶದ ಬಳಿಕವೂ ನೀರು ಬಿಡದಿದ್ದಕ್ಕೆ ಕರ್ನಾಟಕ 2480 ಕೋಟಿ ಪರಿಹಾರ ನೀಡಬೇಕೆಂದು ಪಟ್ಟು ಹಿಡಿದಿದೆ. 
ಇಂದು ಮುಂಜಾನೆ ಅಪೆಕ್ಸ್ ಕೋರ್ಟ್ ಉಭಯ ರಾಜ್ಯಗಳಿಗೆ ಒಂದು ವಾರದೊಳಗೆ ಸಾಕ್ಷಿಗಳ ಪಟ್ಟಿಯನ್ನು ಫೈಲ್ ಮಾಡುವಂತೆ ಆದೇಶಿಸಿತ್ತು. ಇದಲ್ಲದೆ, ಸಾಕ್ಷಿಗಳ ಅಫಿಡವಿಟ್ ವಿವರಗಳನ್ನು ನಾಲ್ಕು ವಾರಗಳಲ್ಲಿ ಪಟ್ಟಿ ಮಾಡಬೇಕು ಎಂದು ನ್ಯಾಯಾಲಯದ ಹೇಳಿದೆ. 
 
ಇನ್ನೊಂದೆಡೆ  ಕೃಷ್ಣಾ ನದಿ ನೀರನ್ನು ಮರು ಹಂಚಿಕೆ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ.
 
ಕೃಷ್ಣಾ ನದಿ ನೀರನ್ನು ಮರುಹಂಚಿಕೆ ಮಾಡಬೇಕೆಂದು ತೆಲಂಗಾಣ ಸರ್ಕಾರ ಮನವಿ ಸಲ್ಲಿಸಿತ್ತು. ಆದರೆ ಮಹಾರಾಷ್ಟ್ರ ಮತ್ತು ಕರ್ನಾಟಕ ಮರುಹಂಚಿಕೆ ಅಗತ್ಯವಿಲ್ಲ ಎಂದಿದ್ದವು. ಆದರೆ ಈ ಮನವಿಯನ್ನು ತಿರಸ್ಕರಿಸಿದ ಕೋರ್ಟ್, ನ್ಯಾಯಾಧೀಕರಣದ ತೀರ್ಪನ್ನು ಎತ್ತಿ ಹಿಡಿದಿದೆ. 
 
ಬರ ಪರಿಸ್ಥಿತಿಯಿಂದ ಕಂಗಾಲಾಗಿರುವ ಕರ್ನಾಟಕಕ್ಕೆ ಸುಪ್ರೀಂ ಆದೇಶ ಸ್ವಲ್ಪ ಮಟ್ಟಿನ ನಿರಾಳತೆಯನ್ನು ತಂದಿದೆ. ಆದರೆ ಸುಪ್ರೀಂ ಆದೇಶ ಹಿನ್ನಡೆಯನ್ನು ಕಂಡಿರುವ ತೆಲಂಗಾಣ ಮತ್ತೆ ಯಾವ ರೀತಿಯಲ್ಲಿ ಕಾನೂನು ಹೋರಾಟಕ್ಕೆ ಇಳಿಯಬಹುದು ಎಂಬುದನ್ನು ಕಾದು ನೋಡಬೇಕು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments