Webdunia - Bharat's app for daily news and videos

Install App

ಪ್ರಧಾನಿ ಮೋದಿ ಹಸ್ತಾಕ್ಷರ ನಕಲು: ಇಬ್ಬರು ಆರೋಪಿಗಳನ್ನು ಬಂಧಿಸಿದ ಸಿಬಿಐ

Webdunia
ಶನಿವಾರ, 23 ಜುಲೈ 2016 (12:31 IST)
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹಸ್ತಾಕ್ಷರವನ್ನು ನಕಲು ಮಾಡಿದ ಆರೋಪದ ಮೇಲೆ ಸಿಬಿಐ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
 
ಸ್ವರಾಜ್ ಕುಮಾರ್ ರಾಯ್ ಮತ್ತು ಸಹಚರ ಸುವೇಂದು ಕುಮಾರ್ ಬರ್ಮನ್ ಎನ್ನುವ ಆರೋಪಿಗಳನ್ನು ವಿಚಾರಣೆ ನಡೆಸಿದ ನಂತರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಸಿಬಿಐ ಮೂಲಗಳು ತಿಳಿಸಿವೆ. 
 
ಜಾರ್ಖಂಡ್‌ನ ಬೋಕಾರೋ ಪಟ್ಟಣದ ನಿವಾಸಿಯಾದ ಸ್ವರಾಜ್ ಕುಮಾರ್ ರಾಯ್, ಪ್ರಧಾನಿ ಮೋದಿಯವರ ಹಸ್ತಾಕ್ಷರ ನಕಲು ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಸಿಬಿಐ ವಕ್ತಾರರು ತಿಳಿಸಿದ್ದಾರೆ.
 
ಆರೋಪಿ ರಾಯ್, ಪ್ರಧಾನಮಂತ್ರಿಯವರ ಹಸ್ತಾಕ್ಷರ ನಕಲು ಮಾಡಿ ಪ್ರಧಾನಿ ಮಂತ್ರಿಯವರ ಕಚೇರಿಗೆ ರವಾನಿಸಿದಾಗ ಘಟನೆ ಬಳಕಿಗೆ ಬಂದಿದೆ. ಕೂಡಲೇ ವಿಷಯವನ್ನು ಸಿಬಿಐಗೆ ಮಾಹಿತಿ ನೀಡಿದ್ದರಿಂದ ಆರೋಪಿಯ ಬಂಧನವಾಗಿದೆ ಎಂದು ಮೂಲಗಳು ತಿಳಿಸಿವೆ.
 
ಜಾರ್ಖಂಡ್‌ನ ಬೋಕಾರೋ ಮತ್ತು ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬಿಷ್ಣಪುರ್ ನಗರಗಳಲ್ಲಿ ಸಿಬಿಐ ದಾಳಿ ನಡೆಸಿದಾಗ ಪ್ರಧಾನಿ ಮೋದಿಯವರ ಹಸ್ತಾಕ್ಷರವಿರುವ ಅನೇಕ ನಕಲಿ ದಾಖಲೆಗಳು ಪತ್ತೆಯಾಗಿವೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments