Webdunia - Bharat's app for daily news and videos

Install App

ಸಿಎಂ ಸಹೋದರನ ಮನೆ ಮೇಲೆ ಸಿಬಿಐ ದಾಳಿ?

Webdunia
ಶುಕ್ರವಾರ, 17 ಜೂನ್ 2022 (15:14 IST)
ಜೈಪುರ : ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ಮನೆ ಮೇಲೆ ಇಂದು ಕೇಂದ್ರ ತನಿಖಾ ದಳವು (ಸಿಬಿಐ) ದಾಳಿ ನಡೆಸಿದೆ.

ಭ್ರಷ್ಟಾಚಾರ ಆರೋಪದ ಮೇಲೆ ಈ ದಾಳಿ ನಡೆಸಲಾಗಿದೆ. ತನಿಖಾ ಸಂಸ್ಥೆ ತಂಡವು ಅಗ್ರಸೇನ್ ಗೆಹ್ಲೋಟ್ ಅವರಿಗೆ ಸಂಬಂಧಿಸಿದ ಕಚೇರಿ ಮೇಲೂ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ. 

ರಸಗೊಬ್ಬರ ರಫ್ತು ಪ್ರಕರಣದ ಆರೋಪ ಹೊತ್ತಿರುವ ಅಗ್ರಸೇನ್ ಗೆಹ್ಲೋಟ್ ಈಗಾಗಲೇ ಜಾರಿ ನಿರ್ದೇಶನಾಲಯ ವಿಚಾರಣೆಗೆ ಒಳಪಟ್ಟಿದ್ದಾರೆ. 2007 ಮತ್ತು 2009ರಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಗೊಬ್ಬರವನ್ನು ಅಕ್ರಮವಾಗಿ ರಫ್ತು ಮಾಡಲಾಗಿದೆ ಎಂದು ಇಡಿ ಆರೋಪಿಸಿತ್ತು.

ರಸಗೊಬ್ಬರ ಪ್ರಕರಣದಲ್ಲಿ ಸರಾಫ್ ಇಂಪೆಕ್ಸ್ ಕಂಪನಿ ಸೇರಿದಂತೆ ಇತರರ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ತನಿಖೆಯನ್ನು ಪ್ರಾರಂಭಿಸಿದೆ. ಅಗ್ರಸೇನ್ ಗೆಹ್ಲೋಟ್ ಒಡೆತನದ ಸಂಸ್ಥೆಯಾದ ಅನುಪಮ್ ಕೃಷಿ, ಸರಾಫ್ ಇಂಪೆಕ್ಸ್ ಮೂಲಕ ಪೊಟ್ಯಾಷ್ ರಫ್ತು ಮಾಡಲಾಗಿತ್ತು. ರಫ್ತು ಮಾಡಿದ ರಸಗೊಬ್ಬರವು ರಾಜಸ್ಥಾನದ ರೈತರಿಗೆ ಮೀಸಲಾಗಿತ್ತು ಎಂದು ಇಡಿ ಹೇಳಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments