Webdunia - Bharat's app for daily news and videos

Install App

ಸಿಬಿಐ : ಐಎಎಸ್ ಅಧಿಕಾರಿಗಳ ವರ್ಗಾವಣೆ

Webdunia
ಶನಿವಾರ, 20 ಆಗಸ್ಟ್ 2022 (10:30 IST)
ನವದೆಹಲಿ : ಅಬಕಾರಿ ನೀತಿಗೆ ಸಂಬಂಧಿಸಿದಂತೆ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಿದ ಕೆಲವೇ ಗಂಟೆಗಳ ಬಳಿಕ ದೆಹಲಿ ಸರ್ಕಾರ 12 ಐಎಎಸ್ ಅಧಿಕಾರಿಗಳನ್ನು ಇಲಾಖೆಗಳ ನಡುವೆ ವರ್ಗಾವಣೆ ಮಾಡಿದೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಭಾರತೀಯ ಆಡಳಿತ ಸೇವೆಗಳ(ಐಎಎಸ್) ಅಧಿಕಾರಿಗಳನ್ನು ತಕ್ಷಣವೇ ವರ್ಗಾವಣೆ ಮಾಡುವಂತೆ ಆದೇಶ ಹೊರಡಿಸಿದ್ದಾರೆ. ಅಧಿಕೃತ ಸೂಚನೆಯಲ್ಲಿ ಲೆಫ್ಟಿನೆಂಟ್ ಗವರ್ನರ್ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೆ ಆದೇಶಿಸಿದ್ದಾರೆ ಎಂದು ಕಚೇರಿ ತಿಳಿಸಿದೆ.

ಜಿತೇಂದ್ರ ನಾರಾಯಣ್, ಅನಿಲ್ ಕುಮಾರ್ ಸಿಂಗ್, ವಿವೇಕ್ ಪಾಂಡೆ, ಶುರ್ಬೀರ್ ಸಿಂಗ್, ಗರಿಮಾ ಗುಪ್ತಾ, ಮಾಧೋರಾವ್ ಮೋರ್, ಉದಿತ್ ಪ್ರಕಾಶ್ ರೈ, ವಿಜೇಂದ್ರ ಸಿಂಗ್ ರಾವತ್, ಕ್ರಿಶನ್ ಕುಮಾರ್, ಕಲ್ಯಾಣ್ ಸಹಾಯ್ ಮೀನಾ, ಸೋನಾಲ್ ಸ್ವರೂಪ ಮತ್ತು ಹೇಮಂತ್ ಕುಮಾರ್ ವರ್ಗಾವಣೆಗೊಂಡ 12 ಅಧಿಕಾರಿಗಳು.

ಹೊಸ ಅಬಕಾರಿ ನೀತಿ ಪ್ರಕರಣದಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಮನೀಶ್ ಸಿಸೋಡಿಯಾ ಅವರ ಮನೆ ಸೇರಿದಂತೆ ರಾಷ್ಟ್ರ ರಾಜಧಾನಿಯ 22 ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ದಾಳಿ ನಡೆಸಿತ್ತು. ಇದಾದ ಬಳಿಕ ಈ ನಿರ್ದೇಶನ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments