Webdunia - Bharat's app for daily news and videos

Install App

ಕಾಶ್ಮಿರ ಸಮಸ್ಯೆ ಇತ್ಯರ್ಥವಾಗುವವರಗೆ ಪಾಕ್‌ನಿಂದ ಕದನ ವಿರಾಮ ಉಲ್ಲಂಘನೆ: ಭೀಮ್ ಸಿಂಗ್

Webdunia
ಸೋಮವಾರ, 20 ಜುಲೈ 2015 (19:41 IST)
ಕಾಶ್ಮಿರದ ಸಮಸ್ಯೆ ಇತ್ಯರ್ಥವಾಗುವವರೆಗೆ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ನಿರಂತರವಾಗಿ ಮುಂದುವರಿಯುತ್ತದೆ ಎಂದು ನ್ಯಾಷನಲ್ ಪ್ಯಾಂಥರ್ ಪಾರ್ಟಿಯ ಅಧ್ಯಕ್ಷ ಭೀಮ್ ಸಿಂಗ್ ಹೇಳಿದ್ದಾರೆ.
 
ನಾನು ಹಲವಾರು ಬಾರಿ ಹೇಳಿದ್ದೇನೆ. ಪಾಕಿಸ್ತಾನ ಇದೇ ಮೊದಲ ಬಾರಿಗೆ ಕದನ ವಿರಾಮ ಉಲ್ಲಂಘಿಸುತ್ತಿಲ್ಲ. ಪಾಕ್ ನಿರಂತರವಾಗಿ ಕದನ ವಿರಾಮ ಉಲ್ಲಂಘಿಸುತ್ತಲೇ ಬಂದಿದೆ. ಪಾಕಿಸ್ತಾನ ಕಳೆದ ವರ್ಷ ಸ್ಥಳೀಯ ಪೊಲೀಸ್‌ನನ್ನು ಹತ್ಯೆ ಮಾಡಲು ಕಮಾಂಡೋನನ್ನು ಕಾಶ್ಮಿರಕ್ಕೆ ಕಳುಹಿಸಿತ್ತು.ಕಾಶ್ಮಿರ ಸಮಸ್ಯೆ ಪರಿಹಾರವಾಗುವವರೆಗೆ ಕದನ ವಿರಾಮ ಉಲ್ಲಂಘನೆಯಾಗುತ್ತಿರುತ್ತದೆ.
 
ಕೇಂದ್ರ ಸರಕಾರ ಆರ್ಟಿಕಲ್ 370ಗೆ ತಿದ್ದುಪಡಿ ತಂದು 35ಎ ಕಾನೂನು ರದ್ದುಗೊಳಿಸಿ ಜಮ್ಮು ಕಾಶ್ಮಿರವನ್ನು ಒಂದಾಗಿಸಿದಲ್ಲಿ ದೇಶದ ಅಂತಾರಾಷ್ಟ್ರೀಯ ನಿಲುವಿನಲ್ಲಿ ಬದಲಾವಣೆ ಕಾಣಬಹುದಾಗಿದೆ ಎಂದು ತಿಳಿಸಿದ್ದಾರೆ.    
 
ನಿನ್ನೆ ಪೂಂಛ್ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನ ಸೈನಿಕರು ಹಲವಾರು ಶಿಬಿರಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಕಳೆದ ಜುಲೈ 15 ರಂದು ಇಲ್ಲಿಯವರೆಗೆ ಏಳು ಬಾರಿ ಪಾಕ್ ಕದನ ವಿರಾಮ ಉಲ್ಲಂಘಿಸಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments