Webdunia - Bharat's app for daily news and videos

Install App

ಪೂರ್ವಾನ್ವಯ ತೆರಿಗೆ ರದ್ದತಿಗೆ ಕೇಂದ್ರದ ಮಹತ್ವದ ನಿರ್ಧಾರ

Webdunia
ಶುಕ್ರವಾರ, 6 ಆಗಸ್ಟ್ 2021 (09:12 IST)
ನವದೆಹಲಿ (ಆ.06): ಕಂಪನಿಗಳ ಮೇಲೆ ಪೂರ್ವಾನ್ವಯ ತೆರಿಗೆ ಪದ್ಧತಿ ಕೊನೆಗೊಳಿಸುವಲ್ಲಿ ಕೇಂದ್ರ ಸರ್ಕಾರ ಗುರುವಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ನಿಟ್ಟಿನಲ್ಲಿ ಅದು ಲೋಕಸಭೆಯಲ್ಲಿ ತೆರಿಗೆ ಕಾನೂನುಗಳ (ತಿದ್ದುಪಡಿ) ಮಸೂದೆ- 2021 ಮಂಡಿಸಿದೆ.

ಇದರ ಅನ್ವಯ 2012 ಮೇ 28ಕ್ಕಿಂತ ಹಿಂದಿನ ವ್ಯವಹಾರಗಳಿಗೆ ವಿಧಿಸಲಾದ ಪೂರ್ವಾನ್ವಯ ತೆರಿಗೆಗಳು ಸಂಪೂರ್ಣ ರದ್ದಾಗಲಿವೆ. ವೊಡಾಫೋನ್, ಕೇರ್ನ್ ಎನರ್ಜಿ ಹಾಗೂ ಇತರ ಕಂಪನಿಗಳಿಂದ ಪಡೆದಿದ್ದ 8100 ಕೋಟಿ ರು. ತೆರಿಗೆಯನ್ನು (ಬಡ್ಡಿ ರಹಿತವಾಗಿ) ಆ ಕಂಪನಿಗಳಿಗೇ ಸರ್ಕಾರ ಮರಳಿಸಲಿದೆ. ಇದೊಂದು ಉದ್ಯಮಸ್ನೇಹಿ ನಿರ್ಧಾರ ಎಂಬ ವ್ಯಾಪಕ ಪ್ರಶಂಸೆ ಉದ್ಯಮ ವಲಯದಲ್ಲಿ ವ್ಯಕ್ತವಾಗಿದೆ.
ಬ್ರಿಟನ್ ಮೂಲದ ಕಂಪನಿಗಳಾದ ತೈಲ ಕ್ಷೇತ್ರದ ಕೇರ್ನ್ ಎನರ್ಜಿ ಹಾಗೂ ಟೆಲಿಕಾಂ ಕ್ಷೇತ್ರದ ವೊಡಾಫೋನ್ಗಳು 2012ಕ್ಕಿಂತ ಮುನ್ನ ಭಾರತದಲ್ಲಿ ಹೂಡಿಕೆ ಮಾಡಿದ್ದವು. ಭಾರತದಲ್ಲಿನ ಹಚ್ ಕಂಪನಿಯನ್ನು ವೊಡಾಫೋನ್ ಖರೀದಿಸಿತ್ತು. 2012ಕ್ಕಿಂತ ಮುನ್ನ ನಡೆದ ವಹಿವಾಟಾದ ಕಾರಣ ಭಾರತ ಸರ್ಕಾರ ಸಾವಿರಾರು ಕೋಟಿ ರು. ಪೂರ್ವಾನ್ವಯ ತೆರಿಗೆ ವಿಧಿಸಿತ್ತು. ಇದು ವಿದೇಶಗಳ ಕೋರ್ಟ್ ಮೆಟ್ಟಿಲೇರಿ ಭಾರತ ಸರ್ಕಾರ ಸೋಲು ಅನುಭವಿಸಿತ್ತು. ಕಟ್ಟಿದ ತೆರಿಗೆ ಹಣ ವಸೂಲಿಗೆ ಕೇರ್ನ್ ಎನರ್ಜಿ ಫ್ರಾನ್ಸ್ನಲ್ಲಿನ ಭಾರತದ ಆಸ್ತಿಗಳ ಹರಾಜಿಗೂ ನಿರ್ಧರಿಸಿತ್ತು. ಇದರ ಬೆನ್ನಲ್ಲೇ ತೆರಿಗೆ ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸಿಎಂ ರೇಖಾ ಗುಪ್ತಾ ಕೊಲ್ಲುವುದಾಗಿ ಬೆದರಿಕೆ: ವ್ಯಕ್ತಿ ಅರೆಸ್ಟ್‌

Siddaramaiah: ಬಕ್ರೀದ್ ಆಚರಣೆಯಿಂದ ದೂರ ಉಳಿದ ಸಿದ್ದರಾಮಯ್ಯ: ಚಿನ್ನಸ್ವಾಮಿ ಇಫೆಕ್ಟ್

ವಿರಾಟ್‌ ಕೊಹ್ಲಿ ಮೇಲಿನ ಪ್ರೀತಿಗೆ ಕೈ ಕೂಯ್ಕೊಂಡ ಹುಚ್ಚು ಅಭಿಮಾನಿ, Viral Video

Chhattisgarh Naxal Encounter: ಐವರು ನಕ್ಸಲರ ಹತ್ಯೆ

ಸಿಎಂ ರಾಜೀನಾಮೆ ಕೊಟ್ಟು ಕ್ಷಮೆ ಕೇಳಲಿ: ಗೋವಿಂದ ಕಾರಜೋಳ

ಮುಂದಿನ ಸುದ್ದಿ
Show comments