Webdunia - Bharat's app for daily news and videos

Install App

ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬದಲಾವಣೆ: ವಯೋವೃದ್ಧರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ

Krishnaveni K
ಗುರುವಾರ, 12 ಸೆಪ್ಟಂಬರ್ 2024 (10:27 IST)
ನವದೆಹಲಿ: ಕೇಂದ್ರ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಒಂದಾದ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಸಣ್ಣ ಬದಲಾವಣೆಯಾಗಿದ್ದು, ವಯೋವೃದ್ಧರಿಗೆ ಕೇಂದ್ರ ಆರೋಗ್ಯ ಇಲಾಖೆ ಗುಡ್ ನ್ಯೂಸ್ ನೀಡಿದೆ.

ಆಯುಷ್ಮಾನ್ ಭಾರತ್ ಯೋಜನೆಯನ್ನು ಇನ್ನು 70 ವರ್ಷ ದಾಟಿದ ವಯೋವೃದ್ಧರೂ ಪಡೆಯಬಹುದಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಅಶ್ವಿನ್ ವೈಷ್ಣವ್ ಘೋಷಿಸಿದ್ದಾರೆ. ಇದರಿಂದ ಸುಮಾರು 4.5 ಕೋಟಿ ಕುಟುಂಬದ 6 ಕೋಟಿಗೂ ಅಧಿಕ ಹಿರಿಯ ನಾಗರಿಕರಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದ್ದಾರೆ.

ಈ ಯೋಜನೆಯಲ್ಲಿ 5 ಲಕ್ಷ ರೂ.ವರೆಗಿನ ಆರೋಗ್ಯ ವಿಮೆ ಲಭ್ಯವಾಗುತ್ತದೆ. ಈ ಯೋಜನೆಯಲ್ಲಿ ಒಳಗೊಂಡ ಹಿರಿಯ ನಾಗರಿಕರಿಗೆ ಇನ್ನು ಹೊಸ ಕಾರ್ಡ್ ವಿತರಿಸಲಾಗುತ್ತದೆ. ಇದರಿಂದ ಈ ಯೋಜನೆಯ ಫಲ ಪಡೆಯಬಹುದಾಗಿದೆ ಎಂದು ಕೇಂದ್ರ ಸಚಿವ ಅಶ್ವಿನ್ ವೈಷ್ಣವ್ ಮಾಹಿತಿ ನೀಡಿದ್ದಾರೆ.

70 ವರ್ಷ ದಾಟಿದ ಹಿರಿಯ ನಾಗರಿಕರು ಕುಟುಂಬದ ಇತರೆ ಕಿರಿಯ ಸದಸ್ಯರನ್ನು ಹೊರತುಪಡಿಸಿ ವರ್ಷಕ್ಕೆ 5 ಲಕ್ಷ ರೂ.ಗಳ ಆರೋಗ್ಯ ವಿಮೆ ಪಡೆಯಬಹುದಾಗಿದೆ. 70 ವರ್ಷ ದಾಟಿದ ಈಗಾಗಲೇ ಸಿಜಿಎಚ್ ಎಸ್, ಇಸಿಎಚ್ಎಸ್, ಅಥವಾ ಆಯುಷ್ಮಾನ್ ಸಿಎಪಿಎಫ್ ನಂತಹ ಆರೋಗ್ಯ ವಿಮೆ ಯೋಜನೆ ಹೊಂದಿರುವ ಫಲಾನುಭವಿಗಳು ಇದೀಗ ಇರುವ ಯೋಜನೆಯಲ್ಲೇ ಮುಂದುವರಿಯಬಹುದು ಅಥವಾ ಎಬಿ ಪಿಎಂ-ಜಯ್ ಯೋಜನೆಗೆ ಬದಲಾಯಿಸಿಕೊಳ್ಳಬಹುದು.

2024 ರಲ್ಲಿ ಪ್ರಧಾನಿ ನರೇಂದ್ರ ಮೋದಿ 70 ವರ್ಷ ದಾಟಿದವರಿಗೂ ಆಯುಷ್ಮಾನ್ ಭಾರತ ಆರೋಗ್ಯ ವಿಮೆ ಸಲ್ಲುವಂತೆ ಆಗಬೇಕು ಎಂದು ಘೋಷಣೆ ಮಾಡಿದ್ದರು. ಅದನ್ನೀಗ ಕೇಂದ್ರ ಸರ್ಕಾರ ಜಾರಿಗೆ ತಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಕ್ಯಾಪ್ಟನ್ ಅಭಿಮನ್ಯುಗೆ ರಾಜೋಚಿತ ಬೀಳ್ಕೋಡುಗೆ ನೀಡಲು ಹೆಚ್ಚಿದ ಒತ್ತಡ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 50:50 ಅನುಪಾತದಡಿ ನಿವೇಶನ ಪಡೆದಿದ್ದವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌

ಅಂಬಾರಿಯಿಂದ ಕ್ಯಾಪ್ಟನ್ ಅಭಿಮನ್ಯು ಈ ಬಾರಿ ಹೊರಗಿಡದಂತೆ ರಾಮಲಿಂಗಾರೆಡ್ಡಿಗೆ ಈಶ್ವರ್ ಖಂಡ್ರೆ ಪತ್ರ

ಮುಖ್ಯಮಂತ್ರಿಗಳು ಹೊಣೆ ಹೊರುವವರೆಗೂ ಹೇಳಿಕೆ ನೀಡುವುದಿಲ್ಲ: ತೇಜಸ್ವಿ ಯಾದವ್ ಮೊದಲ ರಿಯಾಕ್ಷನ್

ಸರ್ಕಾರಕ್ಕೆ ಮಾನ, ಮರ್ಯಾದೆ ಇದ್ದರೆ ನಾಗೇಂದ್ರ ರಾಜೀನಾಮೆ ಪಡೆಯಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments