Webdunia - Bharat's app for daily news and videos

Install App

ವಿಷಾನಿಲ ದಾಳಿಗೆ ಉಗ್ರರ ಸಂಚು: ದೇಶಾದ್ಯಂತ ಹೈಅಲರ್ಟ್

Webdunia
ಭಾನುವಾರ, 10 ಸೆಪ್ಟಂಬರ್ 2017 (19:12 IST)
ಏರ್ ಪೋರ್ಟ್, ಮೆಟ್ರೋ ರೈಲು, ರೈಲು ಮತ್ತು ಬಸ್ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸುವಂತೆ ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರಗಳಿಗೆ ಸ್ಪಷ್ಟ ಸೂಚನೆ ನೀಡಿದೆ.

ವಿಮಾನಗಳು ಸೇರಿದಂತೆ ಸಾರ್ವಜನಿಕ ಸಾರಿಗೆ ಮೇಲೆ ಭಯೋತ್ಪಾದಕರು ಕೆಮಿಕಲ್ ದಾಳಿಗೆ ಉದ್ದೇಶಿಸಿರುವ ಕೇಂದ್ರ ಗುಪ್ತಚರ ಇಲಾಖೆಯ ಮಾಹಿತಿ ಆಧರಿಸಿ ದೇಶಾದ್ಯಂತ ಹೈ ಅಲರ್ಟ್`ಗೆ ಗೃಹ ಇಲಾಖೆ ಸೂಚಿಸಿದೆ. ಭದ್ರತಾ ವ್ಯವಸ್ಥೆ ಬಲಪಡಿಸುತ್ತಿದ್ದಂತೆ ಉಗ್ರರು ದಾಳಿಗೆ ಹೊಸ ಹೊಸ ದಾರಿಗಳನ್ನ ಹುಡುಕುತ್ತಿದ್ದಾರೆ. ಇದರ ಮುಂದುವರೆದ ಭಾಗವೇ ಕೆಮಿಕಲ್ ಅಟ್ಯಾಕ್.

ವಿಷಾನಿಲ ಪ್ರಯೋಗ, ಕೀಟನಾಶಕಗಳ ಸಿಂಪಡಣೆ, ಆಸಿಡ್ ಬಳಕೆ,ತಂಪು ಪಾನೀಯಗಳಿಗೆ ವಿಷ ಹಾಕುವುದು ಈ ರೀತಿಯ ಕೆಮಿಕಲ್ ಯುದ್ಧಕ್ಕೆ ಭಯೋತ್ಪಾದಕರು ಸಂಚು ರೂಪಿಸಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಸಿಕ್ಕಿದೆ. ಅದರಲ್ಲೂ ಬಸ್, ವಿಮಾನ, ಮೆಟ್ರೋ ರೈಲಿನಂತಹ ಬಾಗಿಲು ಮುಚ್ಚಿದ ಪ್ರದೇಶಗಳಲ್ಲಿ ವಿಷಾನಿಲ ಪ್ರಭಾವ ಹೆಚ್ಚಿರುತ್ತದೆ. ಇಲ್ಲಿ ವಿಧ್ವಂಸಕ ಕೃತ್ಯ ನಡೆಸಿ ಅಧಿಕ ಜನರನ್ನ ಬಲಿ ಪಡೆಯುವುದು ಉಗ್ರರ ಪ್ಲಾನ್.

ಈ ಹಿಂದೆ ಇರಾನಿನಲ್ಲಿ ಐಸಿಸ್ ಉಗ್ರರು ನಡೆಸಿದ ವಿಷಾನಿಲ ದಾಳಿಯಲ್ಲಿ ನೂರಾರು ಮುಗ್ಧರು ಪ್ರಾಣಬಿಟ್ಟಿದ್ದರು. ವಿಷಾನಿಲ ಅಷ್ಟು ಅಪಾಯವೆಂದರೆ, ಕೆಲ ಪ್ರಭಾವಶಾಲಿ ಅನಿಲಗಳು ಕ್ಷಣಮಾತ್ರದಲ್ಲಿ ಪ್ರಾಣ ತೆಗೆಯುತ್ತವೆ.

 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮಲ್ಪೆ: ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆ

GoodNews: ಒಂದನೇ ತರಗತಿ ಸೇರ್ಪಡೆ ವಯೋಮಿತಿ ಗೊಂದಲಕ್ಕೆ ತೆರೆ ಎಳೆದ ಸಚಿವ ಮಧುಬಂಗಾರಪ್ಪ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments