Select Your Language

Notifications

webdunia
webdunia
webdunia
webdunia

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ಆಪರೇಷನ್ ಸಿಂಧೂರ್

Sampriya

ಬೆಂಗಳೂರು , ಗುರುವಾರ, 19 ಜೂನ್ 2025 (19:27 IST)
Photo Credit X
ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಬಿಕ್ಕಟ್ಟು ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಈಗಾಗಲೇ ಇರಾನ್‌ನಲ್ಲಿರುವ ಭಾರತೀಯರನ್ನು ಕರೆತರಲು  'ಆಪರೇಷನ್ ಸಿಂಧು' ಘೋಷಿಸಿದ್ದ ಕೇಂದ್ರ ಸರ್ಕಾರವು ಈಗ ಇದಕ್ಕೆ ಸಮಾನವಾಗಿ ಇಸ್ರೇಲ್‌ನಿಂದಲೂ ಭಾರತೀಯ ಪ್ರಜೆಗಳನ್ನು ಕರೆತರಲು ಮುಂದಾಗಿದೆ. 

ಈ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಪ್ರಕಟಣೆ ಹೊರಡಿಸಿದ್ದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಈ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇಸ್ರೇಲ್ ಮತ್ತು ಇರಾನ್ ನಡುವಣ ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು, ಇಸ್ರೇಲ್‌ನಿಂದ ಹೊರ ಬರಲು ಬಯಸುವ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಲು ಭಾರತ ಸರ್ಕಾರ ಮುಂದಾಗಿದೆ. 

ಇಸ್ರೇಲ್‌ನಿಂದ ಭಾರತಕ್ಕೆ ಅವರ ಪ್ರಯಾಣವನ್ನು ಭೂಗಡಿಯ ನಂತರ ವಿಮಾನದ ಮೂಲಕ ಸುಗಮಗೊಳಿಸುತ್ತದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಈ ಹಿನ್ನೆಲೆ ಟೆಲ್‌ ಅವೀವ್‌ನಲ್ಲಿರುವ ಭಾರತೀಯ ಕಚೇರಿಯು ಪ್ರಜೆಗಳ ಸ್ಥಳಾಂತರಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಲಿದೆ. ಅಲ್ಲದೆ ಈಗಾಗಲೇ ಹೆಸರು ನೋಂದಾಯಿಸದ ಪ್ರಜೆಗಳು ಈ ಕೆಳಗಿನ ಲಿಂಕ್‌ಗೆ ಭೇಟಿ ಕೊಟ್ಟು ಹೆಸರು ನೋಂದಾಯಿಸಿಕೊಳ್ಳುವಂತೆ ವಿನಂತಿಸಲಾಗಿದೆ.

ಯಾವುದೇ ಸಂದೇಹಗಳಿದ್ದರೆ 24/7 ಗಂಟೆ ಚಾಲ್ತಿಯಲ್ಲಿರುವ ದೂರವಾಣಿ ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್