Webdunia - Bharat's app for daily news and videos

Install App

ಮಿ ಟೂ ಅಭಿಯಾನದ ಬಗ್ಗೆ ಕೇಂದ್ರ ಸಚಿವರ ವಿವಾದಾತ್ಮಕ ಹೇಳಿಕೆ

Webdunia
ಶುಕ್ರವಾರ, 19 ಅಕ್ಟೋಬರ್ 2018 (08:30 IST)
ನವದೆಹಲಿ: ದೇಶದಾದ್ಯಂತ ಸಂಚಲನ ಮೂಡಿಸಿರುವ ಲೈಂಗಿಕ ಶೋಷಣೆ ವಿರುದ್ಧದ ಮಿ ಟೂ ಅಭಿಯಾನದ ಬಗ್ಗೆ ಬಿಜೆಪಿ ಸಂಸದ, ಕೇಂದ್ರ ಸಚಿವ ರಾಧಾಕೃಷ್ಣನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಇದು ವಿಕೃತ ಮನಸ್ಥಿತಿಯುಳ್ಳವರು ಆರಂಭಿಸಿದ ಅಭಿಯಾನ ಎಂದು ಸಚಿವ ರಾಧಾಕೃಷ್ಣನ್ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಹಿಂದೆಯೂ ಹಲವು ಬಾರಿ ಸಚಿವರು ವಿವಾದಾತ್ಮಕ ಹೇಳಿಕೆಗಳಿಂದ ಚರ್ಚೆಗೊಳಗಾಗಿದ್ದರು. ಮಹಿಳೆಯರ ಮೇಲೆ ಅತ್ಯಾಚಾರ ತಡೆಯಲು ಭಗವಾನ್ ಶ್ರೀರಾಮಚಂದ್ರ ಬಂದರೂ ಸಾಧ್ಯವಿಲ್ಲ ಎಂದು ಹಿಂದೊಮ್ಮೆ ಅವರು ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಇದೀಗ ಮಿ ಟೂ ಅಭಿಯಾನದಲ್ಲಿ ಮಹಿಳಾ ಪತ್ರಕರ್ತರು ಕೇಂದ್ರ ಸಚಿವ ಎಂ ಜೆ ಅಕ್ಬರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಹೊರಿಸಿ ಅವರ ರಾಜೀನಾಮೆಗೆ ಕಾರಣರಾದ ಬಳಿಕ ರಾಧಾಕೃಷ್ಣನ್ ಇಂತಹದ್ದೊಂದು ಹೇಳಿಕೆ ನೀಡಿದ್ದಾರೆ.

‘ನಾನು ನೀವು ಎಲ್ಲರೂ ಮಹಿಳೆಯರೊಂದಿಗೆ ಕೆಲಸ ಮಾಡುತ್ತೇವೆ. ಒಂದು ವೇಳೆ ನಿಮ್ಮ ವಿರುದ್ಧ ನೀವು ಐದನೇ ಕ್ಲಾಸ್ ನಲ್ಲಿದ್ದಾಗ ಸಹಪಾಠಿ ಹುಡುಗಿ ಜತೆ ಆಡುವಾಗ ತಪ್ಪಾಗಿ ನಡೆದುಕೊಂಡಿದ್ದೀರಿ ಎಂದು ಆರೋಪಿಸಿದರೆ ಹೇಗಿರುತ್ತದೆ? ಇದನ್ನು ಒಪ್ಪಿಕೊಳ್ಳುವಿರಾ? ಇದು ನ್ಯಾಯವೇ?’ ಎಂದು ಸಚಿವರು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ