ಡಾ ಮನಮೋಹನ್ ಸಿಂಗ್ ಗೆ ಸ್ಮಾರಕದ ಕಾಂಗ್ರೆಸ್ ಬೇಡಿಕೆ ಒಪ್ಪಿದ ಕೇಂದ್ರ ಸರ್ಕಾರ

Krishnaveni K
ಶನಿವಾರ, 28 ಡಿಸೆಂಬರ್ 2024 (09:31 IST)
ನವದೆಹಲಿ: ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರ ಅಂತಿಮ ಕ್ರಿಯೆ ಮತ್ತು ಸ್ಮಾರಕ ಕುರಿತಂತೆ ಕಾಂಗ್ರೆಸ್ ಮಾಡಿದ್ದ ಮನವಿಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಮೊನ್ನೆ ನಮ್ಮನ್ನಗಲಿದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಗೆ ಅಟಲ್ ಬಿಹಾರಿ ವಾಜಪೇಯಿಯಂತೆ ಪ್ರತ್ಯೇಕ ಸ್ಥಳದಲ್ಲಿ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಕಾಂಗ್ರೆಸ್ ಮೋದಿ ಸರ್ಕಾರಕ್ಕೆ ಬೇಡಿಕೆಯಿಟ್ಟಿತ್ತು. ಅದಕ್ಕೀಗ ಸರ್ಕಾರ ಒಪ್ಪಿಗೆ ನೀಡಿದೆ.

ಈ ಬಗ್ಗೆ ಕೇಂದ್ರ ಸಚಿವಾಲಯದಿಂದ ಮನಮೋಹನ್ ಸಿಂಗ್ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ವಯೋಸಹಜ ಖಾಯಿಲೆಗಳಿಂದಾಗಿ ಮೃತಪಟ್ಟ ಮನಮೋಹನ್ ಸಿಂಗ್ ಗೆ ಸ್ಮಾರಕ ನಿರ್ಮಿಸುವಂತೆ ಕಾಂಗ್ರೆಸ್ ಶ್ರದ್ಧಾಂಜಲಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಬಳಿಕ ಎಐಸಿಸಿ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರಕ್ಕೆ ಪತ್ರ ಬರೆದು ಈ ಬಗ್ಗೆ ಮನವಿ ಮಾಡಿದ್ದರು.

ಇಂದು ಬೆಳಿಗ್ಗೆ 11.45 ಕ್ಕೆ ಸಕಲ ಸರ್ಕಾರೀ ಗೌರವಗಳೊಂದಿಗೆ ಮನಮೋಹನ್ ಸಿಂಗ್ ಅಂತ್ಯಕ್ರಿಯೆ ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ನಡೆಯಲಿದೆ. ಇದೀಗ ಎಐಸಿಸಿ ಕಚೇರಿಯಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇವರ ಕುರ್ಚಿ ಕಾಳಗದಲ್ಲಿ ಕರ್ನಾಟಕದ ಉದ್ಯೋಗ ಆಂಧ್ರ ಪಾಲಾಗಿದೆ: ಛಲವಾದಿ ನಾರಾಯಣಸ್ವಾಮಿ

ರಾಷ್ಟ್ರ ರಾಜಧಾನಿಯಲ್ಲಿ ಸಾಂಪ್ರದಾಯಿಕ ಪಟಾಕಿಗಳ ಅಬ್ಬರಕ್ಕೆ ಸುಪ್ರೀಂ ಕೋರ್ಟ್‌ ಬ್ರೇಕ್

ಡಿ.ಕೆ.ಶಿವಕುಮಾರ್‌ ಬೆನ್ನಲ್ಲೇ ಹಾಸನಾಂಬೆಯ ಆಶೀರ್ವಾದ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ

ಆಯುರ್ವೇದ ಚಿಕಿತ್ಸೆಗಾಗಿ ಭಾರತಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ನಿಧನ: ಮೋದಿ ಸಂತಾಪ

ಹೃದಯಸ್ತಂಭನ: ಗೋವಾದ ಎರಡು ಬಾರಿಯ ಮುಖ್ಯಮಂತ್ರಿ, ಹಾಲಿ ಸಚಿವ ರವಿ ನಾಯ್ಕ್ ನಿಧನ

ಮುಂದಿನ ಸುದ್ದಿ
Show comments