ಯುದ್ಧಕ್ಕೆ ಸನ್ನದ್ಧ: ಶಸ್ತ್ರಾಸ್ತ್ರ ಸಂಗ್ರಹಕ್ಕೆ ಸೇನೆಗೆ ಹಣಕಾಸು ಅಧಿಕಾರ ನೀಡಿದ ಕೇಂದ್ರ

Webdunia
ಗುರುವಾರ, 13 ಜುಲೈ 2017 (10:28 IST)
ನವದೆಹಲಿ: ಒಂದೆಡೆ ಭಾರತ-ಚೀನಾ ಗಡಿಯಲ್ಲಿ ಪ್ರಕ್ಷುಬ್ಧ ವಾತಾವರಣ ಮುಂದುವರೆದಿದ್ದು ಇನ್ನೊಂದೆಡೆ ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ ಕೂದ ನಡೆಯುತ್ತಿರುವ ಹಿನ್ನಲೆಯಲ್ಲಿ ಯುದ್ಧ ಸನ್ನದ್ಧ ಶಸ್ತ್ರಾಸ್ತ್ರ ಸಂಗ್ರಹಕ್ಕೆ ಸೇನೆಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. 
 
46 ವಿಧದ ಮದ್ದುಗುಂಡುಗಳು ಮತ್ತು 10 ಬಗೆಯ ಶಸ್ತ್ರಾಸ್ತ್ರಗಳ ಸಂಗ್ರಹಕ್ಕೆ ಸೇನೆಗೆ ಪೂರ್ಣ ಹಣಕಾಸು ಅಧಿಕಾರ ನೀಡಲಾಗಿದೆ. ಪೂರ್ಣ ಪ್ರಮಾಣದ ಶಸ್ತ್ರಾಸ್ತ್ರ ವ್ಯವಸ್ಥೆಗಾಗಿ ರೂ.40,000 ಕೋಟಿ ವೆಚ್ಚವಾಗಬಹುದು ಎನ್ನಲಾಗಿದೆ. 
 
ಸೇನೆಯಲ್ಲಿ ಮದ್ದುಗುಂಡುಗಳ ಭಾರೀ ಕೊರತೆ ಇದೆ ಎಂದು 2015ರಲ್ಲಿಯೇ ಸಿಎಜಿ ವರದಿಯಲ್ಲಿ ತಿಳಿಸಿತ್ತು. 40 ದಿನಗಳ ಯುದ್ಧಕ್ಕೆ ಸಾಕಾಗುವಷ್ಟು ಮದ್ದುಗುಂಡು ಸಂಗ್ರಹದಲ್ಲಿ ಇರಬೇಕು ಎಂಬುದು ನಿಯಮ. ಆದರೆ, ಮದ್ದುಗುಂಡುಗಳ ಭಾರೀ ಕೊರತೆಯಿಂದಾಗಿ ಈ ನಿಯಮವನ್ನು 20 ದಿನಗಳ ಮದ್ದುಗುಡುಗಳಿಗೆ ಇಳಿಸಲಾಗಿತ್ತು. ಸೇನೆಯ ಯುದ್ಧ ಸನ್ನದ್ಧತೆಯ ಸ್ಥಿತಿಯ ಬಗ್ಗೆ ಸಿಎಜಿ ಮತ್ತು ಸಂಸದೀಯ ಸಮಿತಿ ಕೂಡ ಪ್ರಶ್ನೆಗಳನ್ನು ಎತ್ತಿದ್ದವು. ಮದ್ದು ಗುಂಡು ಮತ್ತಿ ಶಸ್ತ್ರಾಸ್ತ್ರಗಳ ತ್ವರಿತ ಖರೀದಿಗೆ ವ್ಯವಸ್ಥೆ ಮಾಡಬೇಕೆಂದು ಸೇನೆ ಈ ಹಿಂದಿನಿಂದಲೂ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುತ್ತಲೇ ಇದೆ. ಈ ಎಲ್ಲಾ ಬೆಳವಣಿಗೆ ಹಿನ್ನಲೆಯಲ್ಲಿ ಹಾಗೂ ಚೀನಾ-ಪಾಕಿಸ್ತಾನ-ಭಾರತ ನಡುವೆ ಉಂಟಾಗಿರುವ ಉದ್ವಿಗ್ನ ವಾತಾವರಣ ಹಿನ್ನಲೆಯಲ್ಲಿ ಇದೀಗ ನಿರ್ಧಾರ ಕೈಗೊಂಡಿರುವ ಕೇಂದ್ರ ಸರ್ಕಾರ ಶಸ್ತ್ರಾಸ್ತ್ರ ವ್ಯವಸ್ಥೆಯನ್ನು ಖರೀದಿಸಲು ಸೇನೆಗೆ ಅಧಿಕಾರ ನೀಡಿದೆ. 
 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments