Webdunia - Bharat's app for daily news and videos

Install App

ಗೋ ಹತ್ಯೆ ನಿಷೇಧಕ್ಕೆ ಕೇಂದ್ರದ ಅಂಕಿತ

Webdunia
ಶನಿವಾರ, 27 ಮೇ 2017 (09:25 IST)
ನವದೆಹಲಿ: ಬಹು ಚರ್ಚಿತ ಗೋ ಹತ್ಯೆ ನಿಷೇಧ ಕಾಯಿದೆಯನ್ನು ಕೊನೆಗೂ ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೊಳಿಸಿದೆ. ಇದರಿಂದ ಇನ್ನು ಮುಂದೆ ವಧಾಗೃಹಕ್ಕೆ ಗೋವುಗಳನ್ನು ಕೊಂಡೊಯ್ದರೆ 7 ವರ್ಷ ಜೈಲು ಮತ್ತು 1 ಲಕ್ಷ ರೂ. ದಂಡ ವಿಧಿಸುವ ವಿಧೇಯಕಕ್ಕೆ ಕೇಂದ್ರ ಪರಿಸರ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.

 
ಅಧಿಕಾರಕ್ಕೆ ಬಂದಾಗಿನಿಂದಲೂ ಗೋ ಹತ್ಯೆ ನಿಷೇಧ ಮಾಡುವುದಾಗಿ ಹೇಳುತ್ತಲೇ ಬಂದಿದ್ದ ಕೇಂದ್ರ ಸರ್ಕಾರ ಕೊನೆಗೂ ಮೂರನೇ ವರ್ಷಾಚರಣೆ ಸಂದರ್ಭದಲ್ಲಿ ಹೇಳಿದಂತೆ ಮಾಡಿದೆ. ಅದರಂತೆ ಇನ್ನು, ಮುಂದೆ ಕೃಷಿ ಚಟುವಟಿಕೆಗಳ ಹೊರತಾಗಿ ಮಾಂಸಕ್ಕಾಗಿ ಗೋವುಗಳ ಮಾರಾಟ ಮಾಡುವಂತಿಲ್ಲ.

ಇದರಿಂದ ಗೋವುಗಳ ಮಾರಾಟ ಪ್ರಕ್ರಿಯೆ ಇನ್ನಷ್ಟು ಕ್ಲಿಷ್ಟವಾಗಲಿದೆ. ಒಂದು ವೇಳೆ ಕೃಷಿ ಉದ್ದೇಶಗಳಿಗೆ ಗೋವುಗಳನ್ನು ಮಾರಾಟ ಮಾಡುವುದಿದ್ದರೆ, ರೈತನೆಂಬ ಸೂಕ್ತ ದಾಖಲೆ ಒದಗಿಸಬೇಕಾಗುತ್ತದೆ. ವಿಶೇಷವೆಂದರೆ ಪರಿಸರ ಖಾತೆ ಸಚಿವರಾಗಿದ್ದ ಅನಿಲ್ ದಾವೆ ಸಾಯುವ ಕೆಲವೇ ದಿನಗಳ ಮೊದಲು ಗೋ ಹತ್ಯೆ ನಿಷೇಧಕ್ಕೆ ಸಹಿ ಹಾಕಿದ್ದರು.

ಆದರೆ ಸರ್ಕಾರದ ನಿರ್ಧಾರಕ್ಕೆ ಮಾಂಸ ಮತ್ತು ಜಾನುವಾರು ರಫ್ತುದಾರರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ. ಇದು ಇಡೀ ಉದ್ಯಮಕ್ಕೆ ಪೆಟ್ಟು ನೀಡಿದಂತಾಗಿದೆ ಎಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments