Webdunia - Bharat's app for daily news and videos

Install App

ಲೈಂಗಿಕ ಕಿರುಕುಳ: ಪರಮೇಶ್ವರ್ ಹೇಳಿಕೆಗೆ ಕೇಂದ್ರ ಗರಂ

Webdunia
ಮಂಗಳವಾರ, 3 ಜನವರಿ 2017 (11:19 IST)
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ನಡೆದ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ನೀಡಿರುವ ಬೇಜವ್ದಾರಿ ಹೇಳಿಕೆಯನ್ನು ಕೇಂದ್ರ ಖಂಡಿಸಿದೆ.  
ಕರ್ನಾಟಕದ ಗೃಹ ಸಚಿವರ ಹೇಳಿಕೆ ನಾಚಿಕೆಗೇಡು. ಮಹಿಳೆಯರ ಮೇಲಿನ ದೌರ್ಜನ್ಯ ಕರ್ನಾಟಕದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಮೇಲೆ ಪ್ರಶ್ನೆ ಎತ್ತಿದೆ. ನಗರ ಪೊಲೀಸರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಎಂದು ಕೇಂದ್ರ ಗೃಹಖಾತೆ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. 
 
ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಎಂಜಿ ರಸ್ತೆಯಲ್ಲಿ ನೆರೆದಿದ್ದ ಮಹಿಳೆಯರನ್ನು ಲೈಂಗಿಕವಾಗಿ ಹಿಂಸಿಸಿದ್ದರು. ಈ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭದ್ರತೆಗೆಂದು ಸಾವಿರಾರು ಪೊಲೀಸರ ನಿಯೋಜನೆಗೊಂಡಿದ್ದರಾದರೂ ಕಿಡಿಗೇಡಿಗಳ ನ್ನು ನಿಯಂತ್ರಿಸಲು ವಿಫಲರಾಗಿದ್ದರು. ಈ ಘಟನೆ ದೇಶಾದ್ಯಂತ ಭಾರೀ ಸುದ್ದಿಯಾಗಿತ್ತು. 
 
ನಿನ್ನೆ ಈ ಘಟನೆಗೆ ಪ್ರತಿಕ್ರಿಯಿಸಿದ್ದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಇಂತಹ ಘಟನೆಗಳನ್ನು ನಿಯಂತ್ರಿಸುವುದು ತುಂಬಾ ಕಷ್ಟ.  ಹೊಸ ವರ್ಷ, ಕ್ರಿಸ್ಮಸ್ ಸಂದರ್ಭದಲ್ಲಿ ಅಪಾರ ಪ್ರಮಾಣದಲ್ಲಿ ಯುವಕ-ಯುವತಿಯರು ಸೇರುತ್ತಾರೆ. ಈ ಸಂದರ್ಭದಲ್ಲಿ ಕಿರುಕುಳದಂತಹ ಘಟನೆಗಳು  ನಡೆಯುವುದು ಸಾಮಾನ್ಯ. ಬೆಂಗಳೂರನ್ನು ದೂಷಿಸುವುದು ಸರಿಯಲ್ಲ.ಈ ರೀತಿಯ ಕಾರ್ಯಕ್ರಮಗಳು ನಗರದಿಂದ ಹೊರವಲಯದಲ್ಲಿ ನಡೆಸಬೇಕು. ಹೊಸವರ್ಷ, ಕ್ರಿಸ್ಮಸ್ ಸಭ್ಯತೆ ತೋರುವ ಬಟ್ಟೆ ಧರಿಸುವಂತೆ ಹೇಳುವುದೂ ಅಸಾಧ್ಯ. ಆದರೆ, ಇಂತಹ ಘಟನೆ ನಡೆಯದಂತೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೊಣೆಗೇಡಿತನದ ಹೇಳಿಕೆ ನೀಡಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಪ್ರಾಣ ಉಳಿಸಿಕೊಳ್ಳಲು ಬಿಲ್ಡಿಂಗ್‌ನಿಂದ ವಿದ್ಯಾರ್ಥಿಗಳು ಹಾರುತ್ತಿರುವ ಭೀಕರ ವಿಡಿಯೋ ವೈರಲ್‌

ಶೀಘ್ರದಲ್ಲೇ ನಿವೃತ್ತಿ ಪಡೆಯುವುದಾಗಿ ಹೇಳಿದ್ದ: ಕ್ಯಾಪ್ಟನ್ ಸುಮೀತ್‌ ಸಬರ್ವಾಲ್‌ಗೆ ತಂದೆಯ ಕಣ್ಣೀರ ಅಂತಿಮ ವಿದಾಯ

ರಾತೋರಾತ್ರಿ ಹಿಂದೂ ಕಾರ್ಯಕರ್ತರ ಮನೆಗೆ ಪೊಲೀಸರ ಭೇಟಿ: ತನಿಖೆಗೆ ಆದೇಶ

ಬಾಂಬ್‌ ಬೆದರಿಕೆ: ನಾಗ್ಪುರ ಏರ್‌ಪೋರ್ಟ್‌ನಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ

ಲಂಡನ್ ಬೆನ್ನಲ್ಲೇ ಪ್ಯಾರಿಸ್‌ಗೆ ನಿಗದಿಯಾಗಿದ್ದ ಏರ್‌ ಇಂಡಿಯಾ ವಿಮಾನ ರದ್ದು

ಮುಂದಿನ ಸುದ್ದಿ