Webdunia - Bharat's app for daily news and videos

Install App

ವ್ಯಾಟ್ಸಪ್ ನಲ್ಲಿ ಮೆಸೇಜ್ ಫಾರ್ವರ್ಡ್ ಮಾಡುವ ಮುನ್ನ ಹುಷಾರ್!

Webdunia
ಗುರುವಾರ, 5 ಜುಲೈ 2018 (09:01 IST)
ನವದೆಹಲಿ: ಇತ್ತೀಚೆಗೆ ಮಕ್ಕಳ ಕಳ್ಳರ ಹಾವಳಿ ಇದೆ ಎಂದು ಸುದ್ದಿ ಹಬ್ಬಿಸಿ ಹಲವರ ಸಾವಿಗೆ ಕಾರಣವಾಗಿದ್ದ ವ್ಯಾಟ್ಸಪ್ ವಿರುದ್ಧ ಕೇಂದ್ರ ಸರ್ಕಾರ ಎಚ್ಚರಿಕೆ ಸಂದೇಶ ರವಾನಿಸಿದೆ.

ಮಕ್ಕಳ ಕಳ್ಳರಿದ್ದಾರೆ ಎಂದೂ ಸೇರಿದಂತೆ ಹಲವು ವದಂತಿಗಳನ್ನು ಹರಿಯಬಿಟ್ಟು ಜವಾಬ್ಧಾರಿಯಿಂದ ನುಣುಚಿಕೊಳ್ಳಬಾರದು ಎಂದು ವ್ಯಾಟ್ಸಪ್ ಗೆ ಕೇಂದ್ರ ಎಚ್ಚರಿಕೆ ಕೊಟ್ಟಿದೆ. ಆದರೆ ಇದಕ್ಕೆ ವ್ಯಾಟ್ಸಪ್ ತನ್ನ ಮೆಸೇಜ್ ಹರಿದಾಡುವಾಗ ಕೈಗೊಳ್ಳಲಿರುವ ಎಚ್ಚರಿಕೆ ಕ್ರಮಗಳನ್ನು ವಿವರಿಸಿದೆ.

ಇಂತಹ ಸಂದೇಶಗಳು ತನ್ನ ತಾಣದಲ್ಲಿ ಹರಿದಾಡದಂತೆ ನೋಡಿಕೊಳ್ಳುವ ಹೊಣೆ ಹೊತ್ತುಕೊಳ್ಳಬೇಕು ಎಂದು ಫೇಸ್ ಬುಕ್ ಮಾಲಿಕತ್ವದ ವ್ಯಾಟ್ಸಪ್ ಸಂಸ್ಥೆಗೆ ಕೇಂದ್ರದ  ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಖಡಕ್ ಸೂಚನೆ ನೀಡಿದೆ. ಇಂತಹ ಸುಳ್ಳು ಸುದ್ದಿ ಹರಿದಾಡದಂತೆ ತಡೆಯಲಿ ವ್ಯಾಟ್ಸಪ್ ಸೇರಿದಂತೆ ಸಾಮಾಜಿಕ ಜಾಲತಾಣಗಳ ನೆರವು ಪಡೆಯಲೂ ಕೇಂದ್ರ ಚಿಂತನೆ  ನಡೆಸಿದೆ.

ಕೇಂದ್ರದ ಎಚ್ಚರಿಕೆಯಿಂದ ಎಚ್ಚೆತ್ತಿರುವ ವ್ಯಾಟ್ಸಪ್ ಇನ್ನು ಮುಂದೆ ಫಾರ್ವರ್ಡ್ ಮೆಸೇಜ್ ಗಳನ್ನು ಜನರು ಫಾರ್ವರ್ಡ್ ಮಾಡುವಾಗ ಅದು ಫಾರ್ವರ್ಡ್ ಮಾಡಿದವರು ಯಾರೆಂದು ಗುರುತಿಸುವ ಸೌಲಭ್ಯವನ್ನು ಒದಗಿಸಲಿದೆ ಎಂದಿದೆ. ಅಲ್ಲದೆ, ಒಂದು ಗ್ರೂಪ್ ನಲ್ಲಿ ಯಾರು ಸಂದೇಶ ಕಳುಹಿಸಬೇಕು, ಕಳುಹಿಸಬಾರದು ಎಂಬ ನಿರ್ಧಾರವನ್ನು ಕೈಗೊಳ್ಳುವ ಸ್ವಾತಂತ್ರ್ಯವನ್ನು ಗ್ರೂಪ್ ಅಡ್ಮಿನ್ ಗೆ ನೀಡಲಿದೆ. ಈ ಮೂಲಕ ಜನರೇ ಸುಳ್ಳು ಸುದ್ದಿಗಳನ್ನು ಹರಡದಂತೆ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಸಮಜಾಯಿಷಿ ನೀಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments