Webdunia - Bharat's app for daily news and videos

Install App

ಲೋಕಸಭೆ ಚುನಾವಣೆಗೆ ಮೊದಲು ಮಾಸ್ಟರ್ ಸ್ಟ್ರೋಕ್: ಸಿಎಎ ಜಾರಿಗೆ ಮುಂದಾದ ಕೇಂದ್ರ

Krishnaveni K
ಶನಿವಾರ, 10 ಫೆಬ್ರವರಿ 2024 (13:28 IST)
Photo Courtesy: Twitter
ನವದೆಹಲಿ: ಲೋಕಸಭೆ ಚುನಾವಣೆಗೆ ಮೊದಲು ಮೋದಿ ಸರ್ಕಾರ ಮತ್ತೊಂದು ಬ್ರಹ್ಮಾಸ್ತ್ರ ಬಳಸಲು ಮುಂದಾಗಿದೆ ದೇಶದಲ್ಲಿ ಪೌರತ್ವ ಕಾಯಿದೆ ಜಾರಿಗೆ ತರಲು ಮುಂದಾಗಿದೆ.

2024 ರ ಲೋಕಸಭೆ  ಚುನಾವಣೆಗೆ ಮೊದಲು ಪೌರತ್ವ ಕಾಯಿದೆ ಜಾರಿಗೆ ತರುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಅವರ ಈ ಹೇಳಿಕೆ ದೇಶದಲ್ಲಿ ಮತ್ತೆ ಹೊಸ ಚರ್ಚೆಗೆ ದಾರಿ ಮಾಡಿಕೊಡಲಿದೆ. 2019 ರಲ್ಲಿ ಲೋಕಸಭೆಯಲ್ಲಿ ಬಿಲ್ ಪಾಸ್ ಮಾಡಲಾಗಿತ್ತು. ಇದೀಗ ಜಾರಿ ಮಾಡುವ ಪ್ರಕ್ರಿಯೆ ನಡೆಯಲಿದೆ.

ಸಿಎಎ ಎಂದರೇನು?
ಸಿಎಎ ಅಥವಾ ಪೌರತ್ವ ಕಾಯಿದೆಯಡಿ 2014 ರ ಡಿಸೆಂಬರ್ ಒಳಗೆ ಬಾಂಗ್ಲಾದೇಶ, ಅಫ್ಘಾನಿಸ್ತಾನ, ಪಾಕಿಸ್ತಾನದಂತಹ ನೆರೆಯ ರಾಷ್ಟ್ರಗಳಿಂದ ಭಾರತಕ್ಕೆ ಬಂದು ನೆಲೆಸುತ್ತಿರುವ ಹಿಂದೂ, ಸಿಖ್, ಬೌಧ್ಧರು, ಪಾರ್ಸಿಗಳು ಮತ್ತು ಕ್ರಿಶ್ಚಿಯನ್ ಸಮುದಾಯದವರಿಗೆ ಇಲ್ಲಿನ ಪೌರತ್ವ ನೀಡುವ ಕಾಯಿದೆಯಾಗಿದೆ. ಈ ಕಾಯಿದೆಯಲ್ಲಿ ಮುಸ್ಲಿಮರು ಒಳಗೊಳ್ಳುವುದಿಲ್ಲ. ಇದುವೇ ಕಾಂಗ್ರೆಸ್ ಸೇರಿದಂತೆ ಕೆಲವು ವಿಪಕ್ಷಗಳ ಪ್ರತಿರೋಧಕ್ಕೆ ಕಾರಣವಾಗಿದೆ. ಕೆಲವೆಡೆ ಇದರಿಂದ ಭಾರತೀಯ ಮುಸ್ಲಿಮರೂ ಪೌರತ್ವ ಕಳೆದುಕೊಳ್ಳಲಿದ್ದಾರೆ ಎಂಬ ತಪ್ಪು ಕಲ್ಪನೆಯಿದೆ. ಆದರೆ ಇಲ್ಲಿನ ಪೌರತ್ವ ಹೊಂದಿರುವ ಮುಸ್ಲಿಮರಿಗೆ ಯಾವುದೇ ತೊಂದರೆಯಿಲ್ಲ ಎಂದು ಈಗಾಗಲೇ ಕೇಂದ್ರ ಸ್ಪಷ್ಟನೆ ನೀಡಿದೆ.

ಅಮಿತ್ ಶಾ ಹೇಳಿದ್ದೇನು?
ಪೌರತ್ವ ಕಾಯಿದೆ ಜಾರಿಗೆ ತರಬೇಕೆಂದು ಮೊದಲು ಹೇಳಿದ್ದೇ ಕಾಂಗ್ರೆಸ್. ಆದರೆ ಈಗ ಕಾಂಗ್ರೆಸ್ ತನ್ನದೇ ಸ್ವ ಹಿತಾಸಕ್ತಿಗೆ ಕಾಯಿದೆಯನ್ನೇ ವಿರೋಧಿಸುತ್ತಿದೆ. ನಮ್ಮ ದೇಶದ ಅಲ್ಪಸಂಖ್ಯಾರನ್ನು ಅದರಲ್ಲೂ ವಿಶೇಷವಾಗಿ ಮುಸ್ಲಿಮರನ್ನು ತಪ್ಪು ದಾರಿಗೆಳೆಯಲಾಗುತ್ತಿದೆ. ಸಿಎಎಯಿಂದ ಇಲ್ಲಿನ ಯಾರ ಪೌರತ್ವಕ್ಕೂ ಧಕ್ಕೆಯಾಗುವುದಿಲ್ಲ. ಬಾಂಗ್ಲಾದೇಶ ಮತ್ತು ಪಾಕಿಸ್ತಾನದಂತಹ ರಾಷ್ಟ್ರಗಳಿಂದ ನಿರಾಶ್ರಿತರಿಗೆ ಮಾತ್ರ ಈ ಕಾಯಿದೆಯಡಿ ಪೌರತ್ವ ನೀಡುವುದಾಗಿದೆ’ ಎಂದಿದ್ದಾರೆ. ಇದೀಗ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಮೋದಿ ಸರ್ಕಾರ ಈ ಕಾಯಿದೆ ಜಾರಿಗೆ ತಂದರೆ ಕಾಂಗ್ರೆಸ್ ಮತ್ತು ಬಿಜೆಪಿಗೆ ಕೆಸರೆರಚಾಟ ಮಾಡಲು ಮತ್ತೊಂದು ಅಸ್ತ್ರ ಸಿಕ್ಕಂತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments