ಯುಪಿಎ ಕೊಟ್ಟಿದ್ದೆಷ್ಟು? ಎನ್ ಡಿಎ ಕೊಟ್ಟಿದ್ದೆಷ್ಟು? ಫೆ.10 ಕ್ಕೆ ಶ್ವೇತಪತ್ರ ಹೊರಡಿಸಲಿರುವ ಕೇಂದ್ರ

Krishnaveni K
ಬುಧವಾರ, 7 ಫೆಬ್ರವರಿ 2024 (11:42 IST)
ನವದೆಹಲಿ: ದಕ್ಷಿಣ ಭಾರತದ ರಾಜ್ಯಗಳು ತೆರಿಗೆ ಹಂಚಿಕೆ ವಿಚಾರದಲ್ಲಿ ನಮಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರ ಯುಪಿಎ ಮತ್ತು ಎನ್ ಡಿಎ ಅವಧಿಯಲ್ಲಿ ಸರ್ಕಾರದ ಆರ್ಥಿಕ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಹೊರಡಿಸಲು ಮುಂದಾಗಿದೆ.

ಫೆಬ್ರವರಿ 10 ರಂದು ಕೇಂದ್ರ ಸರ್ಕಾರ ಕಾಂಗ್ರೆಸ್ ನೇತೃತ್ವದ ಯುಪಿಎ ಅವಧಿಯಲ್ಲಿ ಮತ್ತು ಬಿಜೆಪಿ ನೇತೃತ್ವದ ಎನ್ ಡಿಎ ಅವಧಿಯಲ್ಲಿ ಯಾವ ರಾಜ್ಯಕ್ಕೆ ಎಷ್ಟು ಹಣ ವಿತರಿಸಿದೆ, ಸರ್ಕಾರದ ಆರ್ಥಿಕ ಸ್ಥಿತಿಗತಿ ಆಗ ಹೇಗಿತ್ತು? ಈಗ ಹೇಗಾಗಿದೆ ಎಂಬುದರ ಕುರಿತು ವಿವರ ನೀಡುವ ಶ್ವೇತಪತ್ರ ಬಿಡುಗಡೆ ಮಾಡಲಿದೆ.

ಸಂಸತ್ತು ಅಧಿವೇಶನ ವಿಸ್ತರಣೆ
ಇದೀಗ ನಡೆಯುತ್ತಿರುವ ಬಜೆಟ್ ಅಧಿವೇಶನವನ್ನು ಶನಿವಾರದವರೆಗೆ ವಿಸ್ತರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಕೊನೆಯ ದಿನ ಯುಪಿಎ ಮತ್ತು ಎನ್ ಡಿಎ ಅವಧಿಯ ಆರ್ಥಿಕ ಸ್ಥಿತಿ ಬಗ್ಗೆ ಶ್ವೇತ ಪತ್ರ ಹೊರಡಿಸಲಾಗುತ್ತದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 2009 ಕ್ಕಿಂತ ಮೊದಲು ಯುಪಿಎ ಅವಧಿ ಮತ್ತು 2014 ರಲ್ಲಿ ಮೋದಿ ನೇತೃತ್ವದಲ್ಲಿ ಎನ್ ಡಿಎ ಅಧಿಕಾರಕ್ಕೆ ಬಂದ ನಂತರ ಅರ್ಥ ವ್ಯವಸ್ಥೆಯ ಬಗ್ಗೆ ಈ ಶ್ವೇತಪತ್ರ ಮಾಹಿತಿ ನೀಡಲಿದೆ. ಶ್ವೇತಪತ್ರ ಮಂಡಿಸುವ ಬಗ್ಗೆ ಈಗಾಗಲೇ  ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ವೇಳೆಯೇ ಹೇಳಿದ್ದರು.

ದಕ್ಷಿಣ ಭಾರತದ ರಾಜ್ಯಗಳ ಆರೋಪ
ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳು ಈಗಾಗಲೇ ಕೇಂದ್ರ ಸರ್ಕಾರ ನಮಗೆ ನಮ್ಮ ತೆರಿಗೆ ಹಣವನ್ನೇ ಕೊಡದೇ ವಂಚಿಸುತ್ತಿದೆ ಎಂದು ಆರೋಪಿಸಿದೆ. ಇದರ ಬಗ್ಗೆ ಈ ರಾಜ್ಯಗಳು ಮುಖ್ಯಮಂತ್ರಿ ನೇತೃತ್ವದಲ್ಲಿ ದೆಹಲಿಯಲ್ಇ ಪ್ರತಿಭಟನೆಗೆ ಮುಂದಾಗಿದೆ. ಇದು ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ ಮೇಲೆ ಋಣಾತ್ಮಕ ಪ್ರಭಾವ ಬೀರುವ ಸಾಧ‍್ಯತೆಯಿದೆ. ಈ ಹಿನ್ನಲೆಯಲ್ಲಿ ಶ್ವೇತಪತ್ರ ಬಿಡುಗಡೆ ಮಾಡಿ ಎಲ್ಲಾ ಆರೋಪಗಳಿಗೂ ಉತ್ತರ ಕೊಡಲು ಕೇಂದ್ರ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವೆಂಬರ್‌ನಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲಿದ್ದಾರೆ ಎಂದಿದ್ದಕ್ಕೆ ಸಿಎಂ ಪ್ರತಿಕ್ರಿಯೆ ಹೀಗಿತ್ತು

ಈ ವಿಚಾರ ಯಾವಾ ಇಲಾಖೆಯಲ್ಲಿ ಗೊತ್ತಾದಲ್ಲಿ ಕಠಿಣ ಕ್ರಮ: ಜಿ ಪರಮೇಶ್ವರ್

ಬರೋಬ್ಬರಿ ನಾಲ್ಕು ಗಂಟೆ ತೆಂಗಿನ ಮರ ಏರಿ ಕುಳಿತ ವ್ಯಕ್ತಿ, ಕಾರಣ ಕೇಳಿದ್ರೆ ಶಾಕ್‌

ಅನಾರೋಗ್ಯ ಕಾರಣಕ್ಕೆ ತಾತ್ಕಾಲಿಕ ಬ್ರೇಕ್ ಪಡೆದ ಸಂಜಯ್ ರಾವುತ್‌ಗೆ ಮೋದಿ ವಿಶ್‌

ನವೆಂಬರ್ 1ರಂದು ಮೈಸೂರು ಝೂಗೆ ಹೋಗುವ 12ವರ್ಷದೊಳಗಿನ ಮಕ್ಕಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments