Webdunia - Bharat's app for daily news and videos

Install App

ಕೇಂದ್ರ ಸರ್ಕಾರ-ಟ್ವಿಟರ್ ನಡುವಿನ ತಿಕ್ಕಾಟಕ್ಕೆ ಕಾರಣವೇನು? ಬ್ಯಾನ್ ಆಗುತ್ತಾ ಟ್ವಿಟರ್?

Webdunia
ಗುರುವಾರ, 11 ಫೆಬ್ರವರಿ 2021 (10:17 IST)
ನವದೆಹಲಿ: ರೈತ ಪ್ರತಿಭಟನೆ ಬಗ್ಗೆ ಸುಳ್ಳು ಮಾಹಿತಿ, ಪ್ರಚೋದನಕಾರಿ ಟ್ವೀಟ್ ಮಾಡುತ್ತಿದ್ದ ಖಾತೆಗಳನ್ನು ಸ್ಥಗಿತಗೊಳಿಸಲು ಕೇಂದ್ರ ಸರ್ಕಾರ ಟ್ವಿಟರ್ ಸಂಸ್ಥೆಗೆ ಸೂಚನೆ ನೀಡಿತ್ತು. ಆದರೆ ಇದನ್ನು ಟ್ವಿಟರ್ ಧಿಕ್ಕರಿಸಿರುವುದು ಕೇಂದ್ರ ಮತ್ತು ಟ್ವಿಟರ್ ನಡುವಿನ ಸಂಘರ್ಷಕ್ಕೆ ಕಾರಣವಾಗಿದೆ.

 

ಸುಮಾರು 1000 ಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್ ಮಾಡುವಂತೆ ಕೇಂದ್ರ ಸೂಚನೆ ನೀಡಿತ್ತು. ಆದರೆ 500 ಖಾತೆಗಳನ್ನು ಸ್ಥಗಿತಗೊಳಿಸಿದ ಟ್ವಿಟರ್ ಇದನ್ನು ತನ್ನ ಬ್ಲಾಗ್ ನಲ್ಲಿ ಬಹಿರಂಗಪಡಿಸಿದ್ದು, ರಾಜಕಾರಣಿಗಳು, ಪತ್ರಕರ್ತರು, ಹೋರಾಟಗಾರರ ಖಾತೆಗಳನ್ನು ಸ್ಥಗಿತಗೊಳಿಸಿದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡಿದಂತೆ ಎಂದು ತಿರುಗಿಬಿದ್ದಿದೆ. ಇದು ಕೇಂದ್ರದ ಕೆಂಗಣ್ಣಿಗೆ ಗುರಿಯಾಗಿದೆ. ಮಾತುಕತೆ ಹಂತದಲ್ಲಿರುವಾಗಲೇ ಈ ವಿಚಾರವನ್ನು ಬ್ಲಾಗ್ ನಲ್ಲಿ ಬಹಿರಂಗಪಡಿಸಿದ್ದು ಕೇಂದ್ರದ ಸಿಟ್ಟಿಗೆ ಕಾರಣವಾಗಿದೆ. ಅಲ್ಲದೆ, ನಮ್ಮ ದೇಶದ ಭದ್ರತೆಗೆ ಧಕ್ಕೆ ತರುವ ಟ್ವಿಟರ್ ಈ ದೇಶದ ಕಾನೂನಿಗೆ ಬೆಲೆಕೊಡುವುದನ್ನು ಕಲಿಯಬೇಕು ಎಂದು ಕಿಡಿ ಕಾರಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments