Webdunia - Bharat's app for daily news and videos

Install App

ತ್ರಿವಳಿ ತಲಾಖ್ ಇತ್ಯರ್ಥವಾಗದಿದ್ದರೆ ಕೇಂದ್ರವೇ ರಂಗಕ್ಕಿಳಿಯುತ್ತದಂತೆ!

Webdunia
ಭಾನುವಾರ, 21 ಮೇ 2017 (04:25 IST)
ನವದೆಹಲಿ: ತ್ರಿವಳಿ ತಲಾಖ್ ನಿಷೇಧ ವಿಚಾರ ಸದ್ಯಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ನಡೆದು ತೀರ್ಪು ಬರುವುದೊಂದೇ ಬಾಕಿ. ಜುಲೈಗೆ ತೀರ್ಪು ಕಾದಿರಿಸಲಾಗಿದ್ದು,  ಅಲ್ಲಿ ತ್ರಿವಳಿ ತಲಾಖ್ ಪದ್ಧತಿ ನಿಷೇಧವಾಗದಿದ್ದರೆ ಕೇಂದ್ರವೇ ಮಧ್ಯಪ್ರವೇಶಿಸಲಿದೆ ಎಂದು ಸಚಿವ ವೆಂಕಯ್ಯ ನಾಯ್ಡು ಹೇಳಿದ್ದಾರೆ.

 
‘ಇದೊಂದು ಸಮುದಾಯಕ್ಕೆ ಸಂಬಂಧಪಟ್ಟ ವಿಷಯ. ಅದುವೇ ನ್ಯಾಯಯುತವಾಗಿ ತೀರ್ಮಾನ ಕೈಗೊಂಡರೆ ಸರಿ. ಇಲ್ಲದಿದ್ದರೆ, ಸರ್ಕಾರವೇ ಮಧ್ಯ ಪ್ರವೇಶಿಸಿ ತ್ರಿವಳಿ ತಲಾಖ್ ನಿಷೇಧಿಸಿ ಕಾನೂನು ಜಾರಿಗೆ ತರಲು ಹಿಂಜರಿಯುವುದಿಲ್ಲ’ ಎಂದಿದ್ದಾರೆ.

‘ಇದು ಯಾವುದೇ ವ್ಯಕ್ತಿಗಳ ವೈಯಕ್ತಿಕ ಜೀವನದಲ್ಲಿ ತಲೆ ಹಾಕುವ ಪ್ರಶ್ನೆಯಲ್ಲ. ಸಮಾಜದಲ್ಲಿ ಆ ಸಮುದಾಯದ ಮಹಿಳೆಯರೂ ಸಮಾನರಾಗಿ ಬದುಕಬೇಕು’ ಎಂದು ವೆಂಕಯ್ಯ ನಾಯ್ಡು ಸ್ಪಷ್ಟನೆ ನೀಡಿದ್ದಾರೆ.

ಹಿಂದೂ ಧರ್ಮದಲ್ಲಿದ್ದ ಸತಿ ಸಹಗಮನ ಪದ್ಧತಿಯ ನಿಷೇಧ ಹಾಗೂ, ವಿಧವಾ ವಿವಾಹ ಪದ್ಧತಿಯ ಆರಂಭ ಸಂಸತ್ತಿನಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿತ್ತು. ಹಾಗಿರುವಾಗ ಇತರ ಸಮುದಾಯಗಳಲ್ಲಿರುವ ಅನಿಷ್ಠ ಪದ್ಧತಿಗಳನ್ನು ನಿಷೇಧಿಸಲು ಹಿಂಜರಿಕೆಯೇಕೆ ಎಂದು ಅವರು ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments