Select Your Language

Notifications

webdunia
webdunia
webdunia
webdunia

ಇಂದಿನಿಂದ ರಾಜ್ಯದಲ್ಲಿ ಸಿಇಟಿ ಪರೀಕ್ಷೆ; ವಿದ್ಯಾರ್ಥಿಗಳು ಈ ನಿಯಮಗಳನ್ನು ಪಾಲಿಸಲೇಬೇಕು..!

ಇಂದಿನಿಂದ ರಾಜ್ಯದಲ್ಲಿ ಸಿಇಟಿ ಪರೀಕ್ಷೆ; ವಿದ್ಯಾರ್ಥಿಗಳು ಈ ನಿಯಮಗಳನ್ನು ಪಾಲಿಸಲೇಬೇಕು..!
ಬೆಂಗಳೂರು , ಶನಿವಾರ, 28 ಆಗಸ್ಟ್ 2021 (09:04 IST)
ಬೆಂಗಳೂರು(ಆ.28): ಕೊರೋನಾ ಆತಂಕದ ನಡುವೆಯೇ ಇಂದಿನಿಂದ 3 ದಿನ ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಯಲಿದೆ. ವೃತ್ತಿಪರ ಕೋರ್ಸ್ಗಳಿಗೆ ಈ ಸಿಇಟಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ಇಲ್ಲದೇ ಪಾಸಾಗಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಎಕ್ಸಾಂ ಬರೆಯಲಿದ್ದಾರೆ.  ಒಟ್ಟು 530 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸರ್ಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ.  ಈ ಬಾರಿ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ನೊಂದಣಿ ಮಾಡಿಕೊಂಡಿದ್ದಾರೆ. ಕೋವಿಡ್ ಮಾರ್ಗಸೂಚಿಯಂತೆ ಪರೀಕ್ಷೆ ನಡೆಯಲಿದೆ.

ಆಗಸ್ಟ್ 28ರಂದು ಜೀವಶಾಸ್ತ್ರ ಮತ್ತು ಗಣಿತ ವಿಷಯಗಳಿಗೆ ಪರೀಕ್ಷೆ ನಡೆದರೆ, ಆಗಸ್ಟ್ 29ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ಪರೀಕ್ಷೆ ನಡೆಸಲಾಗುತ್ತೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆಯು ಆಗಸ್ಟ್ 30ರಂದು ನಿಗದಿಯಾಗಿದೆ. ನಿನ್ನೆಯೇ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದು ಬೆಳಗ್ಗೆ 10.30ರಿಂದ 11.50ರವರೆಗೆ ಜೀವಶಾಸ್ತ್ರ,  ಮಧ್ಯಾಹ್ನ 2.30ರಿಂದ 3.50ರವರೆಗೆ ಗಣಿತ ಪರೀಕ್ಷೆ  ನಡೆಯಲಿದೆ. ಆಗಸ್ಟ್ 29ರಂದು ಭಾನುವಾರ ಬೆಳಗ್ಗೆ 10.30ರಿಂದ 11.50 ರವರೆಗೆ ಭೌತಶಾಸ್ತ್ರ,  ಮಧ್ಯಾಹ್ನ 2.30ರಿಂದ 3.50ರವರೆಗೆ ರಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಆಗಸ್ಟ್ 30ರಂದು ಸೋಮವಾರ ಬೆಳಗ್ಗೆ 11.30ರಿಂದ 12.50 ರವರೆಗೆ ಹೊರನಾಡು, ಗಡಿನಾಡ ಕನ್ನಡಿಗ ಹಾಗೂ ಕನ್ನಡಿಗ ಅಭ್ಯರ್ಥಿಗಳಿಗೆ ಪರೀಕ್ಷೆ ನಿಗದಿಯಾಗಿದೆ.
ಅಭ್ಯರ್ಥಿಗಳು http://kea.kar.nic.in  ನಲ್ಲಿ ತಮ್ಮ ಪ್ರವೇಶ ಪತ್ರ ಡೌನ್ ಲೋಡ್ ಮಾಡಿಕೊಳ್ಳಬೇಕು.
ಇನ್ನು, 530 ಪರೀಕ್ಷಾ ಕೇಂದ್ರಗಳ ಪೈಕಿ ಬೆಂಗಳೂರಿನಲ್ಲಿ 86 ಕೇಂದ್ರಗಳನ್ನು ಆಯೋಜಿಸಲಾಗಿದೆ. ಆಯಾ ಜಿಲ್ಲಾಧಿಕಾರಿಗಳು ಜಿಲ್ಲೆಯ ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಹಾಯಕ ಆಯುಕ್ತರ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ವ್ಯವಸ್ಥೆ ನಿಯೋಜನೆ ಮಾಡಲಾಗಿದೆ.
ಒಟ್ಟು 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು, 530 ಪ್ರಶ್ನೆಪತ್ರಿಕೆ ಪಾಲಕರು, 8409 ಕೊಠಡಿ ಮೇಲ್ವಿಚಾರಕರು ಹಾಗೂ 20,415 ಅಧಿಕಾರಿ ವರ್ಗದ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಹೊರನಾಡು ಮತ್ತು ಗಡಿನಾಡು ಅಭ್ಯರ್ಥಿಗಳಿಗೆ 6 ಸ್ಥಳಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಅವರಿಗೆ ಪರೀಕ್ಷೆ ಇರುತ್ತದೆ.

ಪರೀಕ್ಷೆ ಸಂದರ್ಭದಲ್ಲಿ ಅನುಸರಿಸಬೇಕಾದ ಕ್ರಮಗಳು

ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು.
•ಓಎಂಆರ್ ಉತ್ತರ ಪತ್ರಿಕೆಯಲ್ಲಿ ಅಭ್ಯರ್ಥಿಗಳು ತಮ್ಮ ಹೆಸರನ್ನು ಬರೆಯಬೇಕು.
•ಅಭ್ಯರ್ಥಿಗಳು ಸಿಇಟಿ ಸಂಖ್ಯೆಯನ್ನು, ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಬರೆದು ತುಂಬಬೇಕು.
•ಒಎಂಆರ್ ಉತ್ತರ ಪತ್ರಿಕೆಯಲ್ಲಿ ಮುದ್ರಿತವಾಗಿರುವ ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ ಮತ್ತು ಪ್ರಶ್ನೆ ಪತ್ರಿಕೆಯಲ್ಲಿರುವ ಕ್ರಮ ಸಂಖ್ಯೆ ಒಂದೇ ಆಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು
•ಉತ್ತರಗಳನ್ನು ಔಒಖ ಉತ್ತರ ಪತ್ರಿಕೆಯಲ್ಲಿ ಶೇಡ್ ಮಾಡುವುದರ ಮೂಲಕ ಉತ್ತರಿಸಬೇಕು.
•ಅಭ್ಯರ್ಥಿಗಳು ತಮ್ಮ ಜೊತೆಯಲ್ಲಿ ನೀಲಿ (Blue) ಅಥವಾ ಕಪ್ಪು ಶಾಯಿಯ ಬಾಲ್ ಪಾಯಿಂಟ್ (Black Ink Ball Point) ಪೆನ್ನನ್ನು ತೆಗೆದುಕೊಂಡು ಹೋಗಬೇಕು.
•ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಳ್ಳುವುದು ಸೂಕ್ತ
ಪರೀಕ್ಷೆಯ ಮೊದಲನೆ ಬೆಲ್ ಆಗುವ ಅರ್ಧ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರವನ್ನು ತಲುಪಬೇಕು.
•ಪ್ರವೇಶ ಪತ್ರದ ಜೊತೆಯಲ್ಲಿ ಅಭ್ಯರ್ಥಿಯು ಕಡ್ಡಾಯವಾಗಿ ಮಾನ್ಯತೆ ಇರುವ ಕಾಲೇಜಿನ ಗುರುತಿನ ಚೀಟಿ ಕಡ್ಡಾಯ.
•2ನೇ ಪಿಯುಸಿ / 12ನೇ ತರಗತಿಯ ಪ್ರವೇಶಪತ್ರ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್, ಇವುಗಳಲ್ಲಿ ಯಾವುದಾದರೂ ಒಂದನ್ನು ತೆಗೆದುಕೊಂಡು ಹೋಗಬೇಕು.
•ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯ ಒಳಗೆ ಯಾವುದೇ ರೀತಿಯ ಕೈಗಡಿಯಾರವನ್ನು ಕಟ್ಟಿಕೊಂಡು / ತೆಗೆದುಕೊಂಡು ಹೋಗುವಂತಿಲ್ಲ.
•ಅಭ್ಯರ್ಥಿಗಳು ಕೊಠಡಿಯ ಒಳಗೆ ಯಾವುದೇ ಟ್ಯಾಬ್ಲೆಟ್ / ಮೊಬೈಲ್ / ಕ್ಯಾಲ್ಕುಲೇಟರ್ಗಳನ್ನು ತರುವಂತಿಲ್ಲ
•ಅಭ್ಯರ್ಥಿಗಳು ಓ.ಎಂ.ಆರ್. ಉತ್ತರ ಹಾಳೆಯಲ್ಲಿ ಎಡಗೈ ಹೆಬ್ಬೆರಳ ಗುರುತನ್ನು ಹಾಕುವಂತಿಲ್ಲ.
ಒಟ್ಟಾರೆ ಕೋವಿಡ್ ಮಾರ್ಗಸೂಚಿ ಹಾಗೂ ಕಟ್ಟುನಿಟ್ಟಿನ ನಿಯಮಗಳೊಂದಿಗೆ ನಾಳೆ ಮತ್ತು ನಾಡಿದ್ದು ಸಿಇಟಿ ಪರೀಕ್ಷೆ ನಡೆಯಲಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ 1301 ಮಂದಿಗೆ ಸೋಂಕು, 17 ಮಂದಿ ಬಲಿ