Webdunia - Bharat's app for daily news and videos

Install App

ಬಡವರಿಗಾಗಿ 5 ರೂ ಊಟ: ಹಳೆಯ ಯೋಜನೆಗೆ ಮತ್ತೆ ಚಾಲನೆ ಕೊಟ್ಟ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು

Krishnaveni K
ಶನಿವಾರ, 17 ಆಗಸ್ಟ್ 2024 (10:25 IST)
ಅಮರಾವತಿ: ಆಂಧ್ರಪ್ರದೇಶದಲ್ಲಿ ಇತ್ತೀಚೆಗೆ ಅಧಿಕಾರಕ್ಕೆ ಬಂದ ಸಿಎಂ ಚಂದ್ರಬಾಬು ನಾಯ್ಡು ಬಡವರಿಗಾಗಿ 5 ರೂ. ಊಟ ನೀಡುವ ಕ್ಯಾಂಟೀನ್ ಗೆ ಮತ್ತೆ ಚಾಲನೆ ನೀಡಿದ್ದಾರೆ. ಇದಕ್ಕೆ ಜನರಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಈ ಹಿಂದೆ ಚಂದ್ರಬಾಬು ನಾಯ್ಡು ಮುಖ್ಯಮಂತ್ರಿಯಾಗಿದ್ದಾಗ ಈ ಯೋಜನೆಯನ್ನು ಜಾರಿಗೆ ತಂದಿದ್ದರು. ‘ಅನ್ನ ಕ್ಯಾಂಟೀನ್’ ಎಂಬ ಯೋಜನೆ ಜಾರಿಗೆ ತಂದಿದ್ದ ಚಂದ್ರಬಾಬು ನಾಯ್ಡು 5 ರೂ.ಗೆ ಊಟ ಸಿಗುವಂತೆ ಮಾಡಿದ್ದರು. ಕರ್ನಾಟಕದ ಇಂದಿರಾ ಕ್ಯಾಂಟೀನ್ ಮಾದರಿಯಲ್ಲೇ ಈ ಯೋಜನೆಯಿದೆ.

ಆದರೆ ಬಳಿಕ ಚಂದ್ರಬಾಬು ನಾಯ್ಡು ಅಧಿಕಾರ ಕಳೆದುಕೊಂಡು ಜಗನ್ ರೆಡ್ಡಿ ಅಧಿಕಾರಕ್ಕೇರಿದರು. 2019 ರಿಂದ 2024 ರವರೆಗೆ ಜಗನ್ ರೆಡ್ಡಿ ಸಿಎಂ ಆಗಿದ್ದಾಗ ಈ ಯೋಜನೆಯನ್ನು ರದ್ದುಪಡಿಸಲಾಗಿತ್ತು. ಇದೀಗ ಮತ್ತೆ ಚಂದ್ರಬಾಬು ನಾಯ್ಡು ಅಧಿಕಾರಕ್ಕೆ ಬಂದ ಬೆನ್ನಲ್ಲೇ ಅನ್ನ ಕ್ಯಾಂಟೀನ್ ಪುನರಾರಂಭ ಮಾಡಲಾಗಿದೆ.

ಯಾರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶಕ್ಕೆ ಅನ್ನ ಕ್ಯಾಂಟೀನ್ ಮತ್ತೆ ಆರಂಭ ಮಾಡಲಾಗಿದೆ ಎಂದು ಸಿಎಂ ಹೇಳಿದ್ದಾರೆ. ಗುಡಿವಾಡದಲ್ಲಿ ಅನ್ನ ಕ್ಯಾಂಟೀನ್ ಯೋಜನೆಗೆ ಮರು ಚಾಲನೆ ನೀಡಿದ ಚಂದ್ರಬಾಬು ನಾಯ್ಡು ಸಾಮಾನ್ಯ ನಾಗರಿಕರೊಂದಿಗೆ ಊಟ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Hit And Run Case: ಅಮೆರಿಕದಲ್ಲಿ ಮುಂದಿನ ತಿಂಗಳು ಪದವಿ ಪಡೆಯಬೇಕಿದ್ದ ಗುಂಟೂರು ವಿದ್ಯಾರ್ಥಿನಿ ಸಾವು

ರಸ್ತೆ ಮಧ್ಯೆಯಲ್ಲಿ ಚೇರ್ ಮೇಲೆ ಕುಳಿತು ರೀಲ್ಸ್ ಹುಚ್ಚಾಟ ಮಾಡಿದವ ಅರೆಸ್ಟ್‌

Rahul Gandhi: ರೋಹಿತ್ ವೇಮುಲಾ ಕಾಯಿದೆ ಜಾರಿಗೊಳಿಸಲು ರಾಹುಲ್ ಗಾಂಧಿ ಪತ್ರ: ಯೆಸ್ ಬಾಸ್ ಎಂದ ಸಿದ್ದರಾಮಯ್ಯ

50 ಕೋಟಿ ಅಲ್ಲ ಲಕ್ಷಕ್ಕೂ ಬೆಲೆ ಬಾಳಲ್ಲ ಸತೀಶ್‌ ಖರೀದಿಸಿದ ನಾಯಿ, ED ದಾಳಿಯಲ್ಲಿ ಅಸಲಿಯತ್ತು ಬಯಲು

60ನೇ ವರ್ಷದಲ್ಲಿ ಹಸೆಮಣೆಯೇರಿದ ಪಶ್ಚಿಮ ಬಂಗಾಳದ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ದಿಲೀಪ್‌ ಘೋಷ್‌

ಮುಂದಿನ ಸುದ್ದಿ
Show comments