Webdunia - Bharat's app for daily news and videos

Install App

ನ್ಯಾಯದೇವತೆ ವಿನ್ಯಾಸದಲ್ಲಿ ಬದಲಾವಣೆ, ಈ ಹಿಂದೆ ಕಪ್ಪು ಪಟ್ಟಿ ಯಾಕೆ ಕಟ್ಟಲಾಗಿತ್ತು

Sampriya
ಗುರುವಾರ, 17 ಅಕ್ಟೋಬರ್ 2024 (18:10 IST)
Photo Courtesy X
ಹೊಸದಿಲ್ಲಿ: ಸುಪ್ರೀಂಕೋರ್ಟ್‌ನಲ್ಲಿ  ಮರು ವಿನ್ಯಾಸಗೊಳಿಸಿರುವ ನ್ಯಾಯದೇವತೆಯ ಪ್ರತಿಮೆಯನ್ನು ಇಂದು ಅನಾವರಣ ಮಾಡಲಾಗಿದ್ದು, ಈ ಹಿಂದೆ ನ್ಯಾಯದೇವತೆ ಕಣ್ಣಿಗೆ ಕಟ್ಟಿದ್ದ ಕಪ್ಪು ಪಟ್ಟಿಯನ್ನು ತೆಗೆಯಲಾಗಿದೆ.

ಸುಪ್ರೀಂ ಕೋರ್ಟ್‌ ಆವರಣದಲ್ಲಿ ನ್ಯಾಯಮೂರ್ತಿಗಳ ಅಧ್ಯಯನಕ್ಕೆ ಮೀಸಲಿರುವ ಗ್ರಂಥಾಲಯದಲ್ಲಿ ಕಣ್ಣಿಗೆ ಬಟ್ಟೆ ಕಟ್ಟದೇ ಇರುವ ಹಾಗೂ ಕೈಯಲ್ಲಿ ಕತ್ತಿಯ ಬದಲಿಗೆ ಸಂವಿಧಾನ ಹಿಡಿದಿರುವ ಹೊಸ ನ್ಯಾಯದೇವತೆಯ ಪ್ರತಿಮೆಯನ್ನು ಅನಾವರಣ ಮಾಡಲಾಗಿದೆ. ಆದರೆ ಈ ಹಿಂದೆಯಿದ್ದ ತಕ್ಕಡಿಯಬನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ.

ಮೂಲಗಳ ಪ್ರಕಾರ ಸಿಜೆಐ ಡಿ. ವೈ. ಚಂದ್ರಚೂಡ್‌ ಅವರ ನೇತೃತ್ವದಲ್ಲಿ ನ್ಯಾಯದೇವತೆ ಪ್ರತಿಮೆಯ ಕಲ್ಪನೆಯನ್ನು ಮರುವಿನ್ಯಾಸಗೊಳಿಸಲಾಗಿದೆ ಎಂದು ತಿಳಿದುಬಂದಿದೆ. ವಸಾಹತುಶಾಹಿ ಪರಂಪರೆಯನ್ನು ದಾಟಿ ಮುಂದುವರಿಯುವ ಅಗತ್ಯ ಈಗ ಎದುರಾಗಿದೆ. ಭಾರತದಲ್ಲಿ ಸಂವಿಧಾನದ ಅನುಸಾರವೇ ನ್ಯಾಯ ವಿತರಣೆಯಾಗಲಿದೆ. ಕಾನೂನು ಕುರುಡಲ್ಲ, ಅದು ಎಲ್ಲರಿಗೂ ಸಮಾನ ಎಂಬ ಸಂದೇಶ ರವಾನಿಸುವುದು ನ್ಯಾಯದೇವತೆ ಪ್ರತಿಮೆ ಮರುವಿನ್ಯಾಸದ ಹಿಂದಿನ ಉದ್ದೇಶವಾಗಿದೆ ಎಂದು ವರದಿಯಾಗಿದೆ.

ಕಾನೂನಿನ ಮುಂದೆ ಎಲ್ಲರಿಗೂ ಸಮಾನ ನ್ಯಾಯ ಎನ್ನುವ ಸಂಕೇತವನ್ನು ಸಾರುವ ಸಲುವಾಗಿ ನ್ಯಾಯದೇವತೆ ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಲಾಗಿತ್ತು. ಇದೀಗ ಕಾನೂನು ಕುರುಡಲ್ಲ.  ಪ್ರತಿಯೊಬ್ಬರನ್ನೂ ಅದು ನೋಡುವಂತಾಗಬೇಕು. ವಸಾಹತುಶಾಹಿ ಕಾನೂನುಗಳ ಹಿನ್ನೆಲೆಯಲ್ಲಿ ನ್ಯಾಯದಾನ ಮಾಡುವುದು ಸಮರ್ಪಕವಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.

<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments