Publish Date: Mon, 20 Dec 2021 (08:53 IST)
Updated Date: Sun, 19 Dec 2021 (23:58 IST)
ನವದೆಹಲಿ: ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಕಾನೂನು ಬಾಹಿರ ಕೆಲಸವನ್ನು ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಕಿಡಿ ಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ನಾಯಕ ರಂಜಿತ್ ಶ್ರೀನಿವಾಸ್ ಹತ್ಯೆಯನ್ನು ತೀವ್ರವಾಗಿ ಖಂಡಿಸಿದರು. ಕೇರಳದ ಆಲಪ್ಪುಳ ಜಿಲ್ಲೆಯಲ್ಲಿ ನಡೆದ ಎಸ್ಡಿಪಿಐ ಹಾಗೂ ಬಿಜೆಪಿ ನಾಯಕರ ಹತ್ಯೆಗಳು ಇಡೀ ರಾಜ್ಯವನ್ನೆ ಬೆಚ್ಚಿ ಬಿಳಿಸಿದೆ ಎಂದು ತಿಳಿಸಿದರು.
ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ರಂಜಿತ್ ಶ್ರೀನಿವಾಸನ್ ಅವರನ್ನು ಬರ್ಬರವಾಗಿ ಹತ್ಯೆಗೈದಿರುವುದು ಖಂಡನೀಯ.