Webdunia - Bharat's app for daily news and videos

Install App

ಲೋಕಸಭೆ ಚುನಾವಣೆ ಬಳಿಕ ಒಂದೊಂದೇ ವಿಕೆಟ್ ಢಮಾರ್

Krishnaveni K
ಬುಧವಾರ, 5 ಜೂನ್ 2024 (16:11 IST)
ನವದದೆಹಲಿ: ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ನಿರೀಕ್ಷೆಯಂತೇ ರಾಜ್ಯಗಳು ಮತ್ತು ರಾಷ್ಟ್ರ ರಾಜಕಾರಣದಲ್ಲಿ ಕೆಲವೊಂದು ಬದಲಾವಣೆಗಳಾಗುತ್ತಿವೆ. ಒಂದೊಂದೇ ನಾಯಕರ ತಲೆದಂಡವಾಗುತ್ತಿದೆ.

 
ಮಹಾರಾಷ್ಟ್ರದಲ್ಲಿ ಡಿಸಿಎಂ ದೇವೇಂದ್ರ ಫಡ್ನವಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಈ ಬಾರಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ.  ಹೀಗಾಗಿ ನೈತಿಕ ಹೊಣೆ ಹೊತ್ತು ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ. ಈ ಬಾರಿ ಮಹಾರಾಷ್ಟ್ರದಲ್ಲಿ ಬಿಜೆಪಿ ಕೇವಲ 9 ಸ್ಥಾನ ಗೆಲ್ಲಲಷ್ಟೇ ಶಕ್ತವಾಗಿದೆ. ಕಳೆದ ಬಾರಿ 23 ಸ್ಥಾನ ಗೆದ್ದುಕೊಂಡಿತ್ತು.

ಇನ್ನೊಂದೆಡೆ ಒಡಿಶ್ಶಾದಲ್ಲಿ ವಿಧಾನಸಭೆಯಲ್ಲಿ ಕಳಪೆ ಸಾಧನೆ ಹಿನ್ನಲೆಯಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇನ್ಮುಂದೆ ಒಡಿಶ್ಸಾದಲ್ಲಿ ಬಿಜೆಪಿ ನೇತೃತ್ವದಲ್ಲಿ ಸರ್ಕಾರ ರಚನೆಯಾಗಲಿದೆ.

ಇನ್ನೊಂದೆಡೆ ಕರ್ನಾಟಕದಲ್ಲೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಕೂಗು ಕೇಳಿಬರುತ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಾರ್ಯನಿರ್ವಹಣೆ ಬಗ್ಗೆ ಸತೀಶ್ ಜಾರಕಿಹೊಳಿ ಬಹಿರಂಗ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಕಳಪೆ ಸಾಧನೆಗೆ ಡಿಕೆ ಶಿವಕುಮಾರ್ ಕೆಲವೊಂದು ಕ್ಷೇತ್ರಗಳನ್ನು ಕಡೆಗಣಿಸಿದ್ದೇ ಕಾರಣ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಕರ್ನಾಟಕದಲ್ಲೂ ಕೆಲವೊಂದು ಬದಲಾವಣೆ ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments