Webdunia - Bharat's app for daily news and videos

Install App

ಚೆನ್ನೈ: ಹಣದ ವಿಚಾರಕ್ಕೆ ಲೈಂಗಿಕ ಕಾರ್ಯಕರ್ತೆಯನ್ನೇ ಕೊಂದ ಗ್ರಾಹಕ

Sampriya
ಗುರುವಾರ, 19 ಸೆಪ್ಟಂಬರ್ 2024 (19:55 IST)
ಚೆನ್ನೈ: ಇಲ್ಲಿನ ತೊರೈಪಕ್ಕಂ ಪ್ರದೇಶದಲ್ಲಿ ಸೂಟ್‌ಕೇಸ್‌ನಲ್ಲಿ ಮಹಿಳೆಯ ತುಂಡರಿಸಿದ ದೇಹದ ಭಾಗಗಳನ್ನು ತೊರೈಪಕ್ಕಂ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮೃತ ಮಹಿಳೆ ಸೆಕ್ಸ್ ವರ್ಕರ್ ಎಂದು ತಿಳಿದುಬಂದಿದ್ದು, ಗ್ರಾಹಕನೇ ಆಕೆಯನ್ನು ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

ಗುರುವಾರ ಬೆಳಗ್ಗೆ ಚೆನ್ನೈನ ತೋರೈಪಕ್ಕಂ ಪ್ರದೇಶದಲ್ಲಿ ಹಣದ ವಿವಾದದ ಹಿನ್ನೆಲೆಯಲ್ಲಿ ಸೆಕ್ಸ್‌ ವರ್ಕರ್‌ ಅನ್ನು ಕೊಂದು, ಆಕೆಯ ತುಂಡರಿಸಿದ ದೇಹದ ಭಾಗಗಳನ್ನು ಸೂಟ್‌ಕೇಸ್‌ನಲ್ಲಿ ವಿಲೇವಾರಿ ಮಾಡಿದ್ದಾನೆ.

ತೊರೈಪಕ್ಕಂ ಪೊಲೀಸರು ಸೂಟ್‌ಕೇಸ್‌ನಿಂದ ಮಹಿಳೆಯ ತುಂಡರಿಸಿದ ದೇಹದ ಭಾಗಗಳನ್ನು ವಶಪಡಿಸಿಕೊಂಡರು, ನಂತರ ತನಿಖೆಯನ್ನು ಪ್ರಾರಂಭಿಸಲಾಯಿತು.

ಪ್ರಾಥಮಿಕ ತನಿಖೆಯ ಪ್ರಕಾರ, ಆಕೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ ಮತ್ತು ಆಕೆಯ ದೇಹವನ್ನು ಹೊಂದಿರುವ ಸೂಟ್‌ಕೇಸ್ ಅನ್ನು ತೊರೈಪಾಕ್ಕಂನ ಐಟಿ ಕಾರಿಡಾರ್ ಬಳಿಯ ವಸತಿ ಪ್ರದೇಶದಲ್ಲಿ ಎಸೆದಿದ್ದಾರೆ.

ಬಂಧಿತನನ್ನು ಶಿವಗಂಗಾ ಜಿಲ್ಲೆಯ ಮಣಿಕಂದನ್ ಎಂದು ಗುರುತಿಸಲಾಗಿದ್ದು, ಕೊಲೆಯಾದ 32ವರ್ಷದ ಮಹಿಳೆ ಮಾಧವರಂ ಮೂಲದವರು.

ವಿಚಾರಣೆ ವೇಳೆ ಮಣಿಕಂದನ್ ಅವರು ಹಣದ ವಿವಾದದ ಹಿನ್ನೆಲೆಯಲ್ಲಿ ಸುತ್ತಿಗೆಯಿಂದ ಆಕೆಯನ್ನು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ