ಚೆನ್ನೈ: ಏರ್‌ ಶೋ ವೇಳೆ ಐವರು ಸಾವು, ಸಂತ್ರಸ್ತರ ಕುಟಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

Sampriya
ಸೋಮವಾರ, 7 ಅಕ್ಟೋಬರ್ 2024 (19:08 IST)
Photo Courtesy X
ತಮಿಳುನಾಡು: ಚೆನ್ನೈನಲ್ಲಿ ನಡೆದ ಭಾರತೀಯ ವಾಯುಪಡೆಯ (ಐಎಎಫ್) ವೈಮಾನಿಕ ಪ್ರದರ್ಶನದ ವೇಳೆ ನೆರೆದಿದ್ದ ಪ್ರೇಕ್ಷಕರಲ್ಲಿ ಐವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಮರೀನಾ ಬೀಚ್‌ನಲ್ಲಿ ಭಾರತೀಯ ವಾಯುಪಡೆಯ ವೈಮಾನಿಕ ಪ್ರದರ್ಶನದ ಕಾರ್ಯಕ್ರಮದಲ್ಲಿ 5 ಜನರ ನಿಧನಕ್ಕೆ ಸಂತಾಪ ಸೂಚಿಸಿದರು.

ಸಿಎಂ ಎಂ.ಕೆ.ಸ್ಟಾಲಿನ್ ಹೇಳಿಕೆ ನೀಡಿ, ಅಧಿಕ ಶಾಖ ಹಾಗೂ ಇತರೆ ವೈದ್ಯಕೀಯ ಕಾರಣಗಳಿಂದ 5 ಸಾವುಗಳು ಸಂಭವಿಸಿವೆ ಎಂದು ತಿಳಿದು ನೋವಾಗಿದೆ. ಐಎಎಫ್ ಬೇಡಿಕೆಯಂತೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಕಾಲ್ತುಳಿತವನ್ನು ತಪ್ಪಿಸಲಾಗಿದೆ ಎಂದು ಅವರು ಹೇಳಿದರು.

ಚೆನ್ನೈನ ಮರೀನಾ ಬೀಚ್‌ನಲ್ಲಿ ಭಾರತೀಯ ವಾಯುಪಡೆಯ ವೈಮಾನಿಕ ಪ್ರದರ್ಶನವನ್ನು ಆಯೋಜಿಸಿದ್ದು, ಈ ವೇಳೆ ನೆರೆದಿದ್ದ ಪ್ರೇಕ್ಷಕರಲ್ಲಿ ಐವರು ಸಾವನ್ನಪ್ಪಿದ್ದು 50 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರ್ಜಲೀಕರಣ ಮತ್ತು ತೀವ್ರ ನಿಶ್ಯಕ್ತಿಯ ಕಾರಣದಿಂದ ಸಾವು ಸಂಭವಿಸಿರುವುದಾಗಿ ತಿಳಿದುಬಂದಿದೆ. ಜನದಟ್ಟಣೆ ಹೆಚ್ಚಾಗಿದ್ದು, ಕಳಪೆ ನಿರ್ವಹಣೆ, ಸಂಚಾರ ಯೋಜನೆಯ ಕೊರತೆ, ಅಸಮರ್ಪಕ ಸಾರ್ವಜನಿಕ ಸಾರಿಗೆ ಈ ದುರಂತಕ್ಕೆ ಕಾರಣ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments