Webdunia - Bharat's app for daily news and videos

Install App

ತಿಹಾರ್ ಜೈಲಿನಲ್ಲಿರುವ ಚೋಟಾ ರಾಜನ್‌ಗೆ ಚೋಟಾ ಶಕೀಲ್‌ನಿಂದ ಜೀವಬೆದರಿಕೆ

Webdunia
ಭಾನುವಾರ, 1 ಮೇ 2016 (16:22 IST)
ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಇಂಡೋನೇಶಿಯಾದಲ್ಲಿ ಬಂಧಿಸಲ್ಪಟ್ಟು ತಿಹಾರ್ ಜೈಲಿನಲ್ಲಿ  ಬಿಗಿ ಭದ್ರತೆಯ ನಡುವಿದ್ದರೂ ಭೂಗತ ಪಾತಕಿ ಚೋಟಾ ರಾಜನ್‌‌ಗೆ ಜೀವ ಬೆದರಿಕೆ ಮುಂದುವರೆದಿದೆ.
 
ಮತ್ತೊಬ್ಬ ಭೂಗತ ಪಾತಕಿ, ದಾವೂದ್ ಇಬ್ರಾಹಿಂ ಬಲಗೈ ಬಂಟ ಚೋಟ ಶಕೀಲ್ ಮತ್ತೆ ರಾಜನ್‌ಗೆ ಜೀವ ಬೆದರಿಕೆ ಹಾಕಿರುವ ಬಹಳ ತಡವಾಗಿ ಬೆಳಕಿಗೆ ಬಂದಿದೆ. 
 
ಚೋಟಾ ಶಕೀಲ್ ತನ್ನ ಮೊಬೈಲ್ ನಂಬರ್‌ನಿಂದ ತಿಹಾರ್ ಜೈಲಿನ ಹಿರಿಯ ಅಧಿಕಾರಿ ಸುನೀಲ್ ಗುಪ್ತಾ ಅವರಿಗೆ ಸಂದೇಶ ಕಳುಹಿಸಿದ್ದು, ಆದಷ್ಟು ಬೇಗ ರಾಜನ್‌ನನ್ನು ಮುಗಿಸುವುದಾಗಿ ಬೆದರಿಕೆ ಒಡ್ಡಿದ್ದಾನೆ. ಈ ಹಿನ್ನೆಲೆಯಲ್ಲಿ ಬಂಧಿತ ಪಾತಕಿಗೆ ನೀಡಿರುವ ಭದ್ರತೆಯನ್ನು ಹೆಚ್ಚಿಸಲಾಗಿದೆ. 
 
ಎಷ್ಟು ದಿನಗಳ ಕಾಲ ಸತ್ತ ಹಂದಿಯನ್ನು ಸಾಯದಂತೆ ರಕ್ಷಿಸುತ್ತಿರಿ. ಆದಷ್ಟು ಬೇಗ ನಾನವನಿಗೆ ಅಂತ್ಯ ಮಾಡುತ್ತೇನೆ ಎಂದು ಶಕೀಲ್ ಸಂದೇಶ ಕಳುಹಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನವೆಂಬರ್ 24 ರಂದು ಈ ಸಂದೇಶ ಬಂದಿತ್ತು ಎಂದು ತಿಳಿದು ಬಂದಿದೆ
 
27 ವರ್ಷಗಳ ಕಾಲ ತಲೆ ಮರೆಸಿಕೊಂಡಿದ್ದ ಚೋಟಾ ರಾಜನ್ ಕಳೆದ ವರ್ಷ ಅಕ್ಟೋಬರ್ 25 ರಂದು ಬಾಲಿಯಲ್ಲಿ ಬಂಧಿಸಲ್ಪಟ್ಟಿದ್ದ. ನವೆಂಬರ್ 6 ರಂದು ಅವರನ್ನು ಭಾರತಕ್ಕೆ ತರಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಮುಂದಿನ ಸುದ್ದಿ
Show comments