Webdunia - Bharat's app for daily news and videos

Install App

ಚಿದಂಬರಂ ಕುಟುಂಬ ತಿಹಾರ್ ಜೈಲು ಸೇರಲಿದೆ: ಸುಬ್ರಮಣಿಯನ್ ಸ್ವಾಮಿ

Webdunia
ಶನಿವಾರ, 23 ಸೆಪ್ಟಂಬರ್ 2017 (09:14 IST)
ನವದೆಹಲಿ: ಚಿದಂಬರಂ ಅವರದ್ದು ವಂಚಕ ಕುಟುಂಬ. ಶೀಘ್ರದಲ್ಲೇ ಇಡೀ ಕುಟುಂಬ ತಿಹಾರ್ ಜೈಲು ಪಾಲಾಗಲಿದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಚಿದಂಬರಂ ಪುತ್ರ ಕಾರ್ತಿ ಮಹಾವಂಚಕ. ಕಾರ್ತಿಗೆ ಸರಿಯಾದ ಶಿಕ್ಷಣವಿಲ್ಲ, ಉದ್ಯೋಗವಿಲ್ಲ. ಆದರೂ ಅಷ್ಟೊಂದು ಸಂಪತ್ತು ಹೇಗೆ ಬಂತು. ಇದೆಲ್ಲವೂ ವಂಚನೆಯಿಂದ ಸಂಪಾದಿಸಿದ್ದು. ತಂದೆ ಚಿದಂಬರಂ ಅಕ್ರಮ ವ್ಯವಹಾರಗಳನ್ನು ಮಾಡುತ್ತಿದ್ದು, ಇದರಿಂದ ಮಗ ಹಣ ಗಳಿಸುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.

ಚಿದಂಬರಂ ಪತ್ನಿ ನಳಿನಿ ಸಹ ಇದರಿಂದ ಹೊರತಾಗಿಲ್ಲ. ಹೀಗಾಗಿ ಎಲ್ಲಾ ಅಕ್ರಮಗಳು ಬಯಲಿಗೆ ಬರಲಿದ್ದು, ಶೀಘ್ರವೇ ಇಡೀ ಕುಟುಂಬ ತಿಹಾರ್ ಜೈಲು ಸೇರಲಿದೆ ಎಂದಿದ್ದಾರೆ.

ಇನ್ನು ಕಾರ್ತಿ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. 2007ರಲ್ಲಿ ಚಿದಂಬರಂ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಇಂದ್ರಾಣಿ ಮುಖರ್ಜಿ ಹಾಗೂ ಪೀಟರ್ ಮುಖರ್ಜಿ ಒಡೆತನದ ಐಎನ್ಎಕ್ಸ್ ಮೀಡಿಯಾಗೆ ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯಿಂದ ಅನುಮತಿ ಪಡೆಯುವಲ್ಲಿ ಅಕ್ರಮವೆಸಗಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ಸಿಬಿಐ ಕಾರ್ತಿ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಈ ಸಂಬಂಧ ಕಾರ್ತಿ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿತ್ತು. ವಿದೇಶಿ ಬ್ಯಾಂಕ್ ಗಳ ಅಕೌಂಟ್ ಗಳನ್ನು ಕ್ಲೋಸ್ ಮಾಡಿ, ದೇಶಬಿಟ್ಟು ಹೊರಡದಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ