Webdunia - Bharat's app for daily news and videos

Install App

ಚಿದಂಬರಂ ಕುಟುಂಬ ತಿಹಾರ್ ಜೈಲು ಸೇರಲಿದೆ: ಸುಬ್ರಮಣಿಯನ್ ಸ್ವಾಮಿ

Webdunia
ಶನಿವಾರ, 23 ಸೆಪ್ಟಂಬರ್ 2017 (09:14 IST)
ನವದೆಹಲಿ: ಚಿದಂಬರಂ ಅವರದ್ದು ವಂಚಕ ಕುಟುಂಬ. ಶೀಘ್ರದಲ್ಲೇ ಇಡೀ ಕುಟುಂಬ ತಿಹಾರ್ ಜೈಲು ಪಾಲಾಗಲಿದೆ ಎಂದು ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ದೆಹಲಿಯಲ್ಲಿ ಮಾತನಾಡಿದ ಅವರು, ಚಿದಂಬರಂ ಪುತ್ರ ಕಾರ್ತಿ ಮಹಾವಂಚಕ. ಕಾರ್ತಿಗೆ ಸರಿಯಾದ ಶಿಕ್ಷಣವಿಲ್ಲ, ಉದ್ಯೋಗವಿಲ್ಲ. ಆದರೂ ಅಷ್ಟೊಂದು ಸಂಪತ್ತು ಹೇಗೆ ಬಂತು. ಇದೆಲ್ಲವೂ ವಂಚನೆಯಿಂದ ಸಂಪಾದಿಸಿದ್ದು. ತಂದೆ ಚಿದಂಬರಂ ಅಕ್ರಮ ವ್ಯವಹಾರಗಳನ್ನು ಮಾಡುತ್ತಿದ್ದು, ಇದರಿಂದ ಮಗ ಹಣ ಗಳಿಸುತ್ತಿದ್ದಾನೆ ಎಂದು ಆರೋಪಿಸಿದ್ದಾರೆ.

ಚಿದಂಬರಂ ಪತ್ನಿ ನಳಿನಿ ಸಹ ಇದರಿಂದ ಹೊರತಾಗಿಲ್ಲ. ಹೀಗಾಗಿ ಎಲ್ಲಾ ಅಕ್ರಮಗಳು ಬಯಲಿಗೆ ಬರಲಿದ್ದು, ಶೀಘ್ರವೇ ಇಡೀ ಕುಟುಂಬ ತಿಹಾರ್ ಜೈಲು ಸೇರಲಿದೆ ಎಂದಿದ್ದಾರೆ.

ಇನ್ನು ಕಾರ್ತಿ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದಿತ್ತು. 2007ರಲ್ಲಿ ಚಿದಂಬರಂ ಕೇಂದ್ರ ಹಣಕಾಸು ಸಚಿವರಾಗಿದ್ದಾಗ ಇಂದ್ರಾಣಿ ಮುಖರ್ಜಿ ಹಾಗೂ ಪೀಟರ್ ಮುಖರ್ಜಿ ಒಡೆತನದ ಐಎನ್ಎಕ್ಸ್ ಮೀಡಿಯಾಗೆ ವಿದೇಶಿ ಬಂಡವಾಳ ಉತ್ತೇಜನ ಮಂಡಳಿಯಿಂದ ಅನುಮತಿ ಪಡೆಯುವಲ್ಲಿ ಅಕ್ರಮವೆಸಗಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ಸಿಬಿಐ ಕಾರ್ತಿ ವಿರುದ್ಧ ಎಫ್ಐಆರ್ ದಾಖಲಿಸಿತ್ತು. ಈ ಸಂಬಂಧ ಕಾರ್ತಿ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿತ್ತು. ವಿದೇಶಿ ಬ್ಯಾಂಕ್ ಗಳ ಅಕೌಂಟ್ ಗಳನ್ನು ಕ್ಲೋಸ್ ಮಾಡಿ, ದೇಶಬಿಟ್ಟು ಹೊರಡದಂತೆ ಸುಪ್ರೀಂಕೋರ್ಟ್ ಆದೇಶಿಸಿತ್ತು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ