Webdunia - Bharat's app for daily news and videos

Install App

ಶಿಕ್ಷಕನಿಂದ ಹಲ್ಲೆ: ಕಣ್ಣು ಕಳೆದುಕೊಂಡ ವಿದ್ಯಾರ್ಥಿ

Webdunia
ಭಾನುವಾರ, 8 ಅಕ್ಟೋಬರ್ 2017 (13:57 IST)
ಉತ್ತರ ಪ್ರದೇಶ: ಕ್ಷುಲ್ಲಕ ಕಾರಣಕ್ಕೆ ಶಿಕ್ಷಕ ಕಪಾಳ ಮೋಕ್ಷ ಮಾಡಿದ್ದು, 5ನೇ ತರಗತಿ ವಿದ್ಯಾರ್ಥಿ ತನ್ನ ಕಣ್ಣು ಕಳೆದುಕೊಂಡಿರುವ ಘಟನೆ ನಡೆದಿದೆ.

ಮೀರತ್ ರಸ್ತೆಯಲ್ಲಿರುವ ಶಾರದನ್ ಪಬ್ಲಿಕ್ ಶಾಲೆಯಲ್ಲಿ ಈ ಘಟನೆ ನಡೆದಿದೆ. ಕಣ್ಣು ಕಳೆದುಕೊಂಡ ವಿದ್ಯಾರ್ಥಿ ಸಹಪಾಠಿ ಬಳಿ ತನ್ನ ನೋಟ್ ಬುಕ್ ಕೇಳಿದ್ದಾನೆ. ಆಗ ಹಿಂದಿನಿಂದ ನೋಡಿದ ಟೀಚರ್, ವಿದ್ಯಾರ್ಥಿಯ ಕಪಾಳಕ್ಕೆ ಹೊಡೆದಿದ್ದಾರೆ. ಹೊಡೆತ ಕಣ್ಣಿನ ಮೆಂಬ್ರೇನ್ ಭಾಗಕ್ಕೆ ತಗುಲಿದ್ದು, ನಿಧಾನವಾಗಿ ಆತ ತನ್ನ ದೃಷ್ಟಿ ಕಳೆದುಕೊಂಡಿದ್ದಾನೆ.

ಘಟನೆ ಬಳಿಕ ವಿದ್ಯಾರ್ಥಿ ಮನೆಗೆ ತೆರಳುತ್ತಿದ್ದಂತೆ ಪೋಷಕರು ಗಮನಿಸಿದ್ದು, ಘಟನೆ ಬಗ್ಗೆ ಮಗು ಪೋಷಕರಲ್ಲಿ ಹೇಳಿಕೊಂಡಿದ್ದಾನೆ. ಕೂಡಲೇ ಶಾಲೆಯ ಆಡಳಿತ ಮಂಡಳಿಯನ್ನು ಭೇಟಿ ಮಾಡಿದ ಪೋಷಕರು ವಿವರಣೆ ಕೇಳಿದ್ದಾರೆ. ಆದರೆ ಘಟನೆಯನ್ನು ನಿರ್ಲಕ್ಷಿಸಿರುವ ಶಾಲೆಯ ಆಡಳಿತ ಮಂಡಳಿ, ಪೋಷಕರನ್ನು ನಿಂದಿಸಿದ್ದಾರೆ.

ಈ ಸಂಬಂಧ ಪೋಷಕರು ಎಸ್ಪಿಗೆ ದೂರು ನೀಡಿದ್ದು, ಎಸ್ಪಿ ವಿದ್ಯಾರ್ಥಿಗೆ ನ್ಯಾಯ ದೊರಕಿಸಿ ಕೊಡುವ ಭರವಸೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

ಮುಂದಿನ ಸುದ್ದಿ
Show comments