Webdunia - Bharat's app for daily news and videos

Install App

ಮದರಸಾ ಶಿಕ್ಷಣ ಸರಿಯಿಲ್ಲ, ಈ ಶಾಲೆಗಳಿಗೆ ಸರ್ಕಾರ ಅನುದಾನ ನಿಲ್ಲಿಸಬೇಕು ಎಂದು ಪತ್ರ ಬರೆದ ಮಕ್ಕಳ ಹಕ್ಕುಗಳ ಆಯೋಗ

Krishnaveni K
ಸೋಮವಾರ, 14 ಅಕ್ಟೋಬರ್ 2024 (12:25 IST)
ನವದೆಹಲಿ: ಮದರಸಾ ಶಿಕ್ಷಣ ಸರಿಯಿಲ್ಲ, ಇಂತಹ ಶಾಲೆಗಳಿಗೆ ಸರ್ಕಾರ ಅನುದಾನ ನೀಡುವುದನ್ನು ಸರ್ಕಾರಗಳು ನಿಲ್ಲಿಸಬೇಕು ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ಸಂರಕ್ಷಣಾ ಆಯೋಗ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.

ಮದರಸಾ ಶಿಕ್ಷಣ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಸರಿಯಾದ ಸಂಸ್ಥೆಗಳಲ್ಲ. ಇಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ. ಇಂತಹ ಶಾಲೆಗಳನ್ನು ಸರ್ಕಾರಗಳು ಪ್ರೋತ್ಸಾಹಿಸಬಾರದು. ಕೂಡಲೇ ಇವುಗಳಿಗೆ ನೀಡುವ ಅನುದಾನಗಳನ್ನು ನಿಲ್ಲಿಸಬೇಕು ಎಂದು ಮಕ್ಕಳ ಹಕ್ಕುಗಳ ಆಯೋಗ ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ನಾವಿನ್ನೂ ಮಕ್ಕಳ ಹಕ್ಕುಗಳ ಆಯೋಗದ ಪತ್ರದಲ್ಲಿ ಏನಿದೆ ಎಂದು ಓದಿಲ್ಲ ಓದಿದ  ಬಳಿಕವೇ ಈ ಬಗ್ಗೆ ಪ್ರತಿಕ್ರಿಯಿಸಬಹುದಾಗಿದೆ. ಆಯೋಗ ನಿಜವಾಗಿ ಮದರಸಾಗಳನ್ನು ಬಂದ್ ಮಾಡುವ ಸಲಹೆ ನೀಡುವ ಬದಲು ಪರ್ಯಾಯ ಮಾರ್ಗಗಳ ಬಗ್ಗೆ ಸಲಹೆ ನೀಡಬಹುದಿತ್ತು. ವಿಪರ್ಯಾಸವೆಂದರೆ ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ತನ್ನ ರಾಜ್ಯದ ಮದರಸಾ ಶಿಕ್ಷಕರ ವೇತನವನ್ನು ಮೂರು ಪಟ್ಟು ಹೆಚ್ಚಿಸಿತ್ತು. ಇದರ ಬೆನ್ನಲ್ಲೇ ಆಯೋಗ ಇಂತಹದ್ದೊಂದು ಸಲಹೆ ನೀಡಿರುವುದು ವಿಶೇಷ ಎಂದಿದ್ದಾರೆ.

ಬಿಜೆಪಿ ಮಿತ್ರ ಪಕ್ಷವಾಗಿರುವ ಜನ ಲೋಕಶಕ್ತಿ ಪಕ್ಷದ ನಾಯಕ ಎಕೆ ಬಾಜಪೇಯಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಯಾವುದೇ ಮದರಸಾಗಳು ಕಾನೂನುಬಾಹಿರವಾಗಿ ನಡೆಸಲಾಗುತ್ತಿದೆ ಎಂದಾದರೆ ಬಂದ್ ಮಾಡಲು ಕ್ರಮ ಕೈಗೊಳ್ಳಬಹುದು. ಇಲ್ಲದೇ ಹೋದರೆ ವಿನಾಕಾರಣ ಬಂದ್ ಮಾಡುವುದರಲ್ಲಿ ಅರ್ಥವಿಲ್ಲ ಎಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments