Webdunia - Bharat's app for daily news and videos

Install App

ಮದರಸಾ ಶಿಕ್ಷಣ ಸರಿಯಿಲ್ಲ, ಈ ಶಾಲೆಗಳಿಗೆ ಸರ್ಕಾರ ಅನುದಾನ ನಿಲ್ಲಿಸಬೇಕು ಎಂದು ಪತ್ರ ಬರೆದ ಮಕ್ಕಳ ಹಕ್ಕುಗಳ ಆಯೋಗ

Krishnaveni K
ಸೋಮವಾರ, 14 ಅಕ್ಟೋಬರ್ 2024 (12:25 IST)
ನವದೆಹಲಿ: ಮದರಸಾ ಶಿಕ್ಷಣ ಸರಿಯಿಲ್ಲ, ಇಂತಹ ಶಾಲೆಗಳಿಗೆ ಸರ್ಕಾರ ಅನುದಾನ ನೀಡುವುದನ್ನು ಸರ್ಕಾರಗಳು ನಿಲ್ಲಿಸಬೇಕು ಎಂದು ರಾಷ್ಟ್ರೀಯ ಮಕ್ಕಳ ಹಕ್ಕು ಸಂರಕ್ಷಣಾ ಆಯೋಗ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದೆ.

ಮದರಸಾ ಶಿಕ್ಷಣ ಮಕ್ಕಳಿಗೆ ವಿದ್ಯಾಭ್ಯಾಸ ನೀಡಲು ಸರಿಯಾದ ಸಂಸ್ಥೆಗಳಲ್ಲ. ಇಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ ಸಿಗುತ್ತಿಲ್ಲ. ಇಂತಹ ಶಾಲೆಗಳನ್ನು ಸರ್ಕಾರಗಳು ಪ್ರೋತ್ಸಾಹಿಸಬಾರದು. ಕೂಡಲೇ ಇವುಗಳಿಗೆ ನೀಡುವ ಅನುದಾನಗಳನ್ನು ನಿಲ್ಲಿಸಬೇಕು ಎಂದು ಮಕ್ಕಳ ಹಕ್ಕುಗಳ ಆಯೋಗ ಎಲ್ಲಾ ರಾಜ್ಯಗಳ ಮುಖ್ಯಕಾರ್ಯದರ್ಶಿಗಳಿಗೆ ಪತ್ರ ಬರೆದಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ನಾವಿನ್ನೂ ಮಕ್ಕಳ ಹಕ್ಕುಗಳ ಆಯೋಗದ ಪತ್ರದಲ್ಲಿ ಏನಿದೆ ಎಂದು ಓದಿಲ್ಲ ಓದಿದ  ಬಳಿಕವೇ ಈ ಬಗ್ಗೆ ಪ್ರತಿಕ್ರಿಯಿಸಬಹುದಾಗಿದೆ. ಆಯೋಗ ನಿಜವಾಗಿ ಮದರಸಾಗಳನ್ನು ಬಂದ್ ಮಾಡುವ ಸಲಹೆ ನೀಡುವ ಬದಲು ಪರ್ಯಾಯ ಮಾರ್ಗಗಳ ಬಗ್ಗೆ ಸಲಹೆ ನೀಡಬಹುದಿತ್ತು. ವಿಪರ್ಯಾಸವೆಂದರೆ ಇತ್ತೀಚೆಗಷ್ಟೇ ಮಹಾರಾಷ್ಟ್ರ ಸರ್ಕಾರ ತನ್ನ ರಾಜ್ಯದ ಮದರಸಾ ಶಿಕ್ಷಕರ ವೇತನವನ್ನು ಮೂರು ಪಟ್ಟು ಹೆಚ್ಚಿಸಿತ್ತು. ಇದರ ಬೆನ್ನಲ್ಲೇ ಆಯೋಗ ಇಂತಹದ್ದೊಂದು ಸಲಹೆ ನೀಡಿರುವುದು ವಿಶೇಷ ಎಂದಿದ್ದಾರೆ.

ಬಿಜೆಪಿ ಮಿತ್ರ ಪಕ್ಷವಾಗಿರುವ ಜನ ಲೋಕಶಕ್ತಿ ಪಕ್ಷದ ನಾಯಕ ಎಕೆ ಬಾಜಪೇಯಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಯಾವುದೇ ಮದರಸಾಗಳು ಕಾನೂನುಬಾಹಿರವಾಗಿ ನಡೆಸಲಾಗುತ್ತಿದೆ ಎಂದಾದರೆ ಬಂದ್ ಮಾಡಲು ಕ್ರಮ ಕೈಗೊಳ್ಳಬಹುದು. ಇಲ್ಲದೇ ಹೋದರೆ ವಿನಾಕಾರಣ ಬಂದ್ ಮಾಡುವುದರಲ್ಲಿ ಅರ್ಥವಿಲ್ಲ ಎಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments