Webdunia - Bharat's app for daily news and videos

Install App

ಮಗು ಮತ್ತು ತನ್ನ ವೃತ್ತಿಜೀವನದ ಮಧ್ಯೆ ಆಯ್ಕೆಯನ್ನು ಕೇಳಬಾರದು : ಹೈಕೋರ್ಟ್‌

Webdunia
ಗುರುವಾರ, 14 ಜುಲೈ 2022 (13:21 IST)
ಮುಂಬೈ : ತಾಯಿಯಾದವಳು ಮಗು ಮತ್ತು ತನ್ನ ವೃತ್ತಿಜೀವನದ ಮಧ್ಯೆ ಆಯ್ಕೆಯನ್ನು ಕೇಳಬಾರದು ಎಂದು ಬಾಂಬೆ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಮಗಳೊಂದಿಗೆ ಪೋಲೆಂಡ್ಗೆ ಸ್ಥಳಾಂತರಗೊಳ್ಳಲು ಅನುಮತಿ ಕೋರಿ ಮಹಿಳೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ವೇಳೆ ನ್ಯಾಯಮೂರ್ತಿ ಭಾರತಿ ಡಾಂಗ್ರೆ ಅವರ ಏಕಸದಸ್ಯ ಪೀಠ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿತು.

ಪುಣೆಯ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಮಹಿಳೆಗೆ ಕಂಪನಿಯು ಪೋಲೆಂಡ್ನಲ್ಲಿ ಪ್ರಾಜೆಕ್ಟ್ ಆಫರ್ ಮಾಡಿತ್ತು. ಈ ಕಾರಣಕ್ಕೆ 2015ರಿಂದ ಪತಿಯಿಂದ ದೂರವಿರುವ ಮಹಿಳೆ ತನ್ನ 9 ವರ್ಷದ ಪುತ್ರಿ ಜೊತೆ ಪೋಲೆಂಡ್ಗೆ ಹೋಗಲು ಅನುಮತಿ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಗೆ ಪತಿ, ತಂದೆ-ಮಗಳ ಬಾಂಧವ್ಯವನ್ನು ಮುರಿಯುವ ಏಕೈಕ ಉದ್ದೇಶದಿಂದ ಪ್ರೊಜೆಕ್ಟ್ ಹೆಸರನ್ನು ಹೇಳಿಕೊಂಡು ಪೋಲೆಂಡ್ಗೆ ಹೋಗುತ್ತಿದ್ದಾಳೆ. ಮಗಳು ತನ್ನಿಂದ ದೂರವಾದರೆ ಮತ್ತೆ ಆಕೆಯನ್ನು ನೋಡಲು ಸಾಧ್ಯವಿಲ್ಲ.

ವೃತ್ತಿ ಜೀವನದ ಕಾರಣ ನೀಡಿ ಮಗಳನ್ನು ತಂದೆಯಿಂದ ಬೇರೆ ಮಾಡುವುದು ಸರಿಯಲ್ಲ. ಅಷ್ಟೇ ಅಲ್ಲದೇ ನೆರೆಯ ದೇಶಗಳಾದ ಉಕ್ರೇನ್ ಮತ್ತು ರಷ್ಯಾದಿಂದಾಗಿ ಪೋಲೆಂಡ್ನಲ್ಲಿ ನಡೆಯುತ್ತಿರುವ ಪರಿಸ್ಥಿತಿಯನ್ನು ಉಲ್ಲೇಖಿಸಿ ಅನುಮತಿ ನೀಡಬಾರದು ಎಂದು ವಾದಿಸಿದ್ದರು. 

ಇಲ್ಲಿಯವರೆಗೆ ಮಗಳನ್ನು ತಾಯಿ ಏಕಾಂಗಿಯಾಗಿ ಬೆಳೆಸಿದ್ದಾರೆ. ಬಾಲಕಿಯ ವಯಸ್ಸನ್ನು ಪರಿಗಣಿಸಿ ಆಕೆ ತನ್ನ ತಾಯಿಯೊಂದಿಗೆ ಹೋಗುವುದು ಮುಖ್ಯ ಎಂದು ಹೇಳಿತು. ಅಷ್ಟೇ ಅಲ್ಲದೇ ಮಗಳ ಜೊತೆ ವರ್ಚುಯಲ್ ಆಗಿ ಮಾತನಾಡಲು ತಂದೆಗೆ ಅನುಮತಿ ನೀಡಬೇಕು.

ತಂದೆ ಮಗಳ ಭೇಟಿಗಾಗಿ ಪ್ರತಿ ರಜಾ ಸಮಯದಲ್ಲಿ ತಾಯಿ ಭಾರತಕ್ಕೆ ಮರಳಬೇಕು ಎಂದು ಸೂಚಿಸಿತು. ಈ ಸಂದರ್ಭದಲ್ಲಿ ತಾಯಿಯಾದವಳು ಮಗು ಮತ್ತು ತನ್ನ ವೃತ್ತಿಜೀವನದ ನಡುವೆ ಮಧ್ಯೆ ಆಯ್ಕೆಯನ್ನು ಕೇಳಬಾರದು ಎಂದು ಅಭಿಪ್ರಾಯ ವ್ಯಕ್ತಪಡಿಸಿತು.

ಮಗಳು ಹೊರ ದೇಶಕ್ಕೆ ಹೋದರೆ ಆತಂಕಕ್ಕೆ ಒಳಗಾಗುತ್ತಾಳೆ ಎಂಬ ತಂದೆ ವಾದವನ್ನು ಒಪ್ಪಿಕೊಳ್ಳಲು ನ್ಯಾಯಾಲಯ ನಿರಾಕರಿಸಿತು. ಮಕ್ಕಳು ತಮ್ಮ ಹೆತ್ತವರೊಂದಿಗೆ ಸ್ಥಳಾಂತರಗೊಳ್ಳುವುದು ಸಾಮಾನ್ಯ ಸಂಗತಿಯಲ್ಲ. ಕೆಲಸ ಮಾಡುವ ಮಹಿಳೆ ತನ್ನ ಜವಾಬ್ದಾರಿಯ ಕಾರಣದಿಂದ ತನ್ನ ಮಗುವನ್ನು ಡೇ-ಕೇರ್ ಸೌಲಭ್ಯದಲ್ಲಿ ಬಿಡುವುದು ಇಂದು ಸಾಮಾನ್ಯವಾಗಿದೆ ಎಂದು ಹೇಳಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments