Webdunia - Bharat's app for daily news and videos

Install App

ನಕಲಿ ಪಾಸ್ ಪೋರ್ಟ್ ಕೇಸ್`ನಲ್ಲಿ ಛೋಟಾ ರಾಜನ್ ದೋಷಿ

Webdunia
ಸೋಮವಾರ, 24 ಏಪ್ರಿಲ್ 2017 (17:55 IST)
ಭೂಗತ ಪಾತಕಿ, ತಿಹಾರ್ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ರಾಜೇಂದ್ರ ಸದಾಶಿವ್ ನಿಖಲ್ಜೆ ಅಲಿಯಾಸ್ ಛೋಟಾ ರಾಜನ್, ನಕಲಿ ಪಾಸ್ ಪೋರ್ಟ್ ಬಳಸಿದ ಪ್ರಕರಣದಲ್ಲಿ ದೋಷಿಯೆಂದು ದೆಹಲಿಯ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ. ಛೋಟಾ ರಾಜನ್ ಸೇರಿ ಅವನಿಗೆ ಸಹಕರಿಸಿದ ಮೂವರು ಸರ್ಕಾರಿ ಅಧಿಕಾರಿಗಳು ದೋಷಿಗಳೆಂದು ವಿಶೇಷ ನ್ಯಾಯಾಧೀಶ ವೀರೇಂದರ್ ಕುಮಾರ್ ಗೋಯಲ್ ತೀರ್ಪಿತ್ತಿದ್ಧಾರೆ.
 

ಮೋಹನ್ ಕುಮಾರ್ ಎಂಬುವವರ ಹೆಸರಲ್ಲಿ ನಕಲಿ ಪಾಸ್ ಪೋರ್ಟ್ ಪಡೆದಿದ್ದ ಛೋಟಾ ರಾಜನ್ ಅದರಲ್ಲೇ ಹಲವು ದೇಶಗಳಿಗೆ ಸಂಚಾರ ನಡೆಸಿದ್ದ. ಈತನಿಗೆ ಮೂವರು ಹಿರಿಯ ಅಧಿಕಾರಿಗಳು ಸಹಕಾರ ನೀಡಿದ್ದರು. ಈ ಬಗ್ಗೆ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.
ನಾಲ್ವರು ಅಪರಾಧಿಗಳ ವಿರುದ್ಧ ಐಪಿಸಿ ಸೆಕ್ಷನ್ 420, 471, 468, 467, 419 ಮತ್ತು 120ಬಿ ಅಡಿಯಲ್ಲಿ ದೋಷಿಗಳೆಂದು ಘೋಷಿಸಲಾಗಿದೆ.ಛೋಟಾ ರಾಜನ್ ಸದ್ಯ, ತಿಹಾರ್ ಜೈಲಿನಲ್ಲಿದ್ದು, ಅಧಿಕಾರಿಗಳು ಜಾನು ಪಡೆದು ಹೊರಗಿದ್ದಾರೆ.

1998-99ರಲ್ಲಿ ಮೋಹನ್ ಕುಮಾರ್ ಹೆಸರಲ್ಲಿ ಅಧಿಕಾರಿಗಳಾದ ಜಯಶ್ರೀ ದತ್ತಾತ್ರೇಯ ರಹಟೆ, ದೀಪಕ್ ನಟ್ವರ್ ಲಾಲ್, ಲಲಿತಾ ಲಕ್ಷ್ಮಣ್ ನಕಲಿ ಪಾಸ್ ಪೋರ್ಟ್ ನೀಡಿದ್ದರು. ಅಕ್ಟೋಬರ್ 2015ರಲ್ಲೇ ಛೋಟಾ ರಾಜನ್`ನನ್ನ ಇಂಡೋನೇಶಿಯಾ ಪೊಲೀಸರು ಬಂಧಿಸಿದ್ದರು. ನವೇಂಬರ್ 2015ರಂದು ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಸುಲಿಗೆ, ಮಾದಕ ವಸ್ತು ಸಾಗಣೆ ಸೇರಿದಂತೆ ಮಹಾರಾಷ್ಟ್ರ, ದೆಹಲಿ, ಗುಜರಾತ್, ಉತ್ತರಪ್ರದೇಶದಲ್ಲಿ ಛೋಟಾರಾಜನ್ ವಿರುದ್ಧ 70 ಪ್ರಕರಣಗಳಿವೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ