Webdunia - Bharat's app for daily news and videos

Install App

ಕೋರ್ಟ್‌ಗಳ ಕುಂದುಕೊರತೆ ಬಗ್ಗೆ ಸಿಜೆಐ ರಮಣ ದನಿ

Webdunia
ಭಾನುವಾರ, 24 ಅಕ್ಟೋಬರ್ 2021 (09:19 IST)
ಹೊಸದಿಲ್ಲಿ: ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮೂಲ ಸೌಕರ್ಯಗಳ ಕೊರತೆಯ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ದನಿಯೆತ್ತಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ಸಮಾರಂಭವೊಂದರಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಸಮ್ಮುಖದಲ್ಲೇ ಈ ವಿಚಾರವನ್ನು ಅವರು ಪ್ರಸ್ತಾವಿಸಿದ್ದಾರೆ.
ಸೌಕರ್ಯಗಳನ್ನು ಕಲ್ಪಿಸುವ ವಿಚಾರ ಯಾವತ್ತಿಗೂ ನಿರ್ಲಕ್ಷಿತ ವಿಚಾರವಾಗಿಯೇ ಉಳಿದಿದೆ. ಇಂಥ ಮನಃಸ್ಥಿತಿಗಳಿಂದಾಗಿ, ದೇಶದ ನ್ಯಾಯಾಲಯಗಳು ಶಿಥಿಲಗೊಂಡಿರುವ ವ್ಯವಸ್ಥೆಗಳಡಿ ಕಾರ್ಯ ನಿರ್ವಹಿಸುತ್ತಿವೆ. ಇದರಿಂದಾಗಿ, ನ್ಯಾಯಾಲಯಗಳು ಪರಿಣಾಮಕಾರಿಯಾಗಿ ಕೆಲಸ ಮಾಡಲು ಕಷ್ಟವಾಗುತ್ತಿದೆ’ ಎಂದು ನ್ಯಾ| ರಮಣ ವಿಷಾದಿಸಿದ್ದಾರೆ. “ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಅಗತ್ಯ ಮೂಲ
ಷರಿಗೆ ಶೌಚಾಲಯವಿಲ್ಲ ಎಂದು ತಿಳಿಸಿದ ಅವರು, ಶೇ. 50ರಷ್ಟು ನ್ಯಾಯಾಲಯಗಳಲ್ಲಿ ಗ್ರಂಥಾಲಯಗಳಿಲ್ಲ. ಶೇ. 46ರಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ’ ಎಂದು ಅವರು ವಿವರಿಸಿದ್ದಾರೆ. “ದೇಶದ ಒಟ್ಟಾರೆ ನ್ಯಾಯಾಲಯಗಳ ಪೈಕಿ ಕೇವಲ ಶೇ.5ರಷ್ಟರಲ್ಲಿ ಮಾತ್ರ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳಿವೆ. ಶೇ. 26ರಷ್ಟು ನ್ಯಾಯಾಲಯಗಳಲ್ಲಿ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯವೇ ಇಲ್ಲ. ಶೇ.16ರಷ್ಟು ಕೋರ್ಟ್ಗಳಲ್ಲಿ ಪುರು
ಈ ಅವ್ಯವಸ್ಥೆಗಳನ್ನು ಸರಿಪಡಿಸಲು, ರಾಷ್ಟ್ರೀಯ ನ್ಯಾಯಾಂಗ ಮೂಲಸೌಕರ್ಯ ಪ್ರಾಧಿಕಾರ ರಚಿಸಬೇಕು ಎಂದು ಅವರು ರಿಜಿಜು ಅವರನ್ನು ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments