ಮತ್ತೆ ಮಣಿಪುರದಲ್ಲಿ ಘರ್ಷಣೆ ಕರ್ಫ್ಯೂ ಜಾರಿ : ಇಂಟರ್ನೆಟ್ ಬಂದ್!

Webdunia
ಮಂಗಳವಾರ, 23 ಮೇ 2023 (13:25 IST)
ಇಂಫಾಲ : ಮೈಟೀಸ್ ಮತ್ತು ಕುಕಿ ಜನಾಂಗದ ನಡುವೆ ಸೋಮವಾರ ನಡೆದ ಘರ್ಷಣೆಯಿಂದಾಗಿ ಮಣಿಪುರದ ರಾಜಧಾನಿ ಇಂಫಾಲನಲ್ಲಿ ಮತ್ತೆ ಕರ್ಫ್ಯೂ ಜಾರಿಗೊಳಿಸಲಾಗಿದೆ. ಅಲ್ಲದೆ ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
 
ಘರ್ಷಣೆ ವ್ಯಾಪಕವಾಗಿ ಹಬ್ಬುವುದನ್ನು ತಡೆಯಲು ಮೇ 26 ರ ವರೆಗೆ ರಾಜ್ಯದಲ್ಲಿ ಇಂಟರ್ನೆಟ್ ಸ್ಥಗಿತ ಗೊಳಿಸಲಾಗಿದೆ. ಅಲ್ಲದೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ರವರೆಗೆ ಕರ್ಫ್ಯೂ ಬಿಗಿಗೊಳಿಸಲಾಗಿದೆ. 2 ರಿಂದ 6 ರ ವರೆಗೆ ಕರ್ಫ್ಯೂ ಸಡಿಲಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಪ್ರತಿಕ್ರಿಯಿಸಿ, ಎರಡು ಸಮುದಾಯಗಳ ನಡುವಿನ ಉದ್ವಿಗ್ನತೆಯ ಬಗ್ಗೆ ವರದಿಗಳು ಬರುತ್ತಲೇ ಇದೆ. ಮೈಟೈಸ್ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಸ್ಥಾನಮಾನ ಶಿಫಾರಸು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು. ಇದಾದ ಬಳಿಕ ಪ್ರತಿಭಟನೆ ವ್ಯಾಪಾಕವಾಗಿ ಹಬ್ಬಿತ್ತು. ಈಗ ಪ್ರಸ್ತುತ ಆ ವಿಚಾರವಾಗಿ ಘರ್ಷಣೆ ನಡೆಯುತ್ತಿಲ್ಲ. ಅಲ್ಲದೆ ಇಂದಿನ ಪ್ರತಿಭಟನೆಯ ಎರಡು ಗುಂಪಿನ ನಡುವೆ ಯಾವುದೇ ದ್ವೇಷವಿಲ್ಲ. ಅರಣ್ಯ ಸಂರಕ್ಷಣೆ ಮತ್ತು ಗಸಗಸೆ ತೆರವುಗೊಳಿಸುವ ಸರ್ಕಾರದ ನೀತಿಗೆ ಪ್ರತಿರೋಧವಾಗಿ ಪ್ರತಿಭಟನೆ ನಡೆದಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ರಾಜಧಾನಿಯಲ್ಲಿ ಇಂದು ಎಷ್ಟು ಇಂಡಿಗೋ ವಿಮಾನ ಹಾರಾಟ ರದ್ದು ಗೊತ್ತಾ

Big Shocking: ರಾಜ್ಯದಲ್ಲಿ ಕ್ಯಾನ್ಸರ್ ಪ್ರಕರಣದಲ್ಲಿ ಹೆಚ್ಚಳ

ಬಿಜೆಪಿ ಚುನಾವಣೆಗಾಗಿ, ನಾವು ದೇಶಕ್ಕಾಗಿ: ಪ್ರಿಯಾಂಕಾ ಗಾಂಧಿ ಕಿಡಿ

ಗುಜರಾತ್ ಸರ್ಕಾರ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದೆ: ಅರವಿಂದ್ ಕೇಜ್ರಿವಾಲ್

ಶುಭ್ಮನ್ ಗಿಲ್, ಹಾರ್ದಿಕ್ ಪಾಂಡ್ಯ ಆರೋಗ್ಯದ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸೂರ್ಯಕುಮಾರ್ ಯಾದವ್

ಮುಂದಿನ ಸುದ್ದಿ
Show comments